Featured

ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ; ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ – vishwanews24

ಮಂಗಳೂರು ದಸರಾ ಮೆರವಣಿಗೆ: ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ದಸರಾ ಮೆರವಣಿಗೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 3ರ ಬೆಳಗ್ಗೆ 6 ಗಂಟೆಯವರೆಗೆ ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ.

ಮೆರವಣಿಗೆ ಕುದ್ರೋಳಿ ದೇವಸ್ಥಾನದಿಂದ ಆರಂಭವಾಗಿ ದುರ್ಗಾಮಹಲ್ ಜಂಕ್ಷನ್, ಮಣ್ಣಗುಡ್ಡೆ, ನಾರಾಯಣಗುರು ವೃತ್ತ, ಲಾಲ್‌ಭಾಗ್, ಬಳ್ಳಾಲ್ ಭಾಗ್, ಕೊಡಿಯಲ್‌ಗುತ್ತು, ಪಿವಿಎಸ್, ನವಭಾರತ ವೃತ್ತ, ಹಂಪನಕಟ್ಟೆ, ಕಾರ್ ಸ್ಟ್ರೀಟ್, ಅಳಕೆ ಬ್ರಿಡ್ಜ್ ಮೂಲಕ ಮತ್ತೆ ದೇವಸ್ಥಾನಕ್ಕೆ ಮರಳಲಿದೆ. ಈ ಸಂದರ್ಭದಲ್ಲಿ ರಸ್ತೆಗಳ ಬದಿಯಲ್ಲಿ ವಾಹನಗಳನ್ನು ನಿಲ್ಲಿಸದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಸಂಚಾರ ಬದಲಾವಣೆ:

ಕೊಟ್ಟಾರ ಚೌಕಿ ಜಂಕ್ಷನ್‌ನಿಂದ ಬರುವ ವಾಹನಗಳು ಕುಂಟಿಕಾನ – ಕೆಪಿಟಿ – ನಂತೂರು ಮುಖಾಂತರ ನಗರಕ್ಕೆ ಪ್ರವೇಶಿಸಬೇಕು.
ಬಂಟ್ಸ್ ಹಾಸ್ಟೆಲ್‌ನಿಂದ ಪಿವಿಎಸ್ ಕಡೆಗೆ ಸಂಚರಿಸುವ ವಾಹನಗಳು ಭಾರತ್ ಬೀಡಿ – ಬಟ್ಟಗುಡ್ಡ – ಕೆಪಿಟಿ ಅಥವಾ ಮಲ್ಲಿಕಟ್ಟೆ ಮಾರ್ಗವಾಗಿ ಹೋಗಬೇಕು.

ಕೆ.ಎಸ್.ಆರ್.ಟಿ.ಸಿ ಜಂಕ್ಷನ್‌ನಿಂದ ಲಾಲ್‌ಭಾಗ್ ಕಡೆಗೆ ಬರುವ ವಾಹನಗಳು ಕಾಪಿಕಾಡ್ – ಕುಂಟಿಕಾನ ಅಥವಾ ಬಿಜೈ ಬಟ್ಟಗುಡ್ಡ ಮಾರ್ಗವನ್ನು ಬಳಸಬೇಕು.

ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಿಗೂ ಇದೇ ಮಾರ್ಗಗಳನ್ನು ಅನುಸರಿಸಲು ಸೂಚಿಸಲಾಗಿದೆ.

ಹಂಪನಕಟ್ಟೆಯಿಂದ ಪಿವಿಎಸ್ ಕಡೆಗೆ ಬರುವ ವಾಹನಗಳು ಅಂಬೇಡ್ಕರ್ ಜಂಕ್ಷನ್ ಮೂಲಕ ಸಂಚರಿಸಬೇಕು.
ಲೇಡಿಹಿಲ್, ನ್ಯೂಚಿತ್ರಾ ಜಂಕ್ಷನ್ ಮತ್ತು ಇತರೆ ಮೆರವಣಿಗೆ ಮಾರ್ಗಗಳಲ್ಲಿಯೂ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಪಾರ್ಕಿಂಗ್ ವ್ಯವಸ್ಥೆ:

ಮೆರವಣಿಗೆ ವೀಕ್ಷಿಸಲು ಬರುವವರು ತಮ್ಮ ವಾಹನಗಳನ್ನು ಕರಾವಳಿ ಮೈದಾನ, ಅಳಕೆ ಮಾರ್ಕೆಟ್, ಉರ್ವ ಮೈದಾನ, ಉರ್ವ ಕೆನರಾ ಸ್ಕೂಲ್, ಪೊಂಪೈ ಚರ್ಚ್, ದುರ್ಗಾಮಹಲ್ ಹೊಟೇಲ್, ಕುದ್ರೋಳಿ ನಾರಾಯಣ ಕಾಲೇಜು, ಬಿ.ಇ.ಎಂ. ಸ್ಕೂಲ್, ಸರಕಾರಿ ಹೆಣ್ಣುಮಕ್ಕಳ ಪ್ರೌಢಶಾಲೆ (ಕಾರ್ ಸ್ಟ್ರೀಟ್) ಹಾಗೂ ಹೊಟೇಲ್ ವಿಮಲೇಶ್ ಮುಂತಾದ ಸ್ಥಳಗಳಲ್ಲಿ ಪಾರ್ಕ್ ಮಾಡಬಹುದು.

ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸಂಚಾರ ನಿಯಮಗಳನ್ನು ಪಾಲಿಸಲು, ನಿಗದಿತ ಪಾರ್ಕಿಂಗ್ ಸ್ಥಳಗಳನ್ನು ಬಳಸಲು ಮತ್ತು ಮೆರವಣಿಗೆಯ ಸಮಯದಲ್ಲಿ ಪೊಲೀಸರು ನೀಡುವ ಮಾರ್ಗದರ್ಶನಕ್ಕೆ ಸಹಕರಿಸಲು ವಿನಂತಿ ಮಾಡಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

16 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

20 hours ago