ಮಂಗಳೂರು: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು.
ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ ಅ.16ರವರೆಗೆ ನಾಲ್ಕು ದಿನ ಹೆಚ್ಚುವರಿಯಾಗಿ ಮಂಗಳೂರು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಅನುಮೋದನೆಯ ಅನ್ವಯ ಸರ್ಕಾರವು ಆದೇಶಿಸಿರುವಂತೆ ಮಂಗಳೂರು ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರವರೆಗೆ ಹೆಚ್ಚುವರಿಯಾಗಿ 4 ದಿನಗಳು ರಜೆ ನೀಡಿದೆ.
ಆದರೆ ಅ.2ರಂದು ಗಾಂಧಿಜಯಂತಿ ಇರುವುದರಿಂದ ಅದನ್ನು ಕಡ್ಡಾಯವಾಗಿ ಆಚರಿಸಬೇಕು. ಹಾಗೆಯೇ ಹೆಚ್ಚುವರಿಯಾಗಿ ನೀಡಿರುವ 4ದಿನಗಳ ರಜೆಯನ್ನು ನವೆಂಬರ್ ತಿಂಗಳಿನಲ್ಲಿ 4 ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸಬೇಕು ಎಂದು ಸೂಚನೆ ಹೊರಡಿಸಿದ್ದಾರೆ.
ಮಂಗಳೂರು : ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…