ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ತನ್ನ ಕ್ಷೇತ್ರದ ಕಾರ್ಯಕರ್ತರಿಗಾಗಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆಗೆ ಉಚಿತವಾಗಿ ಅವಕಾಶ ಕಲ್ಪಿಸಿದ್ದರು. ಈ ವೇಳೆ ಅವರೇ ಸಿನಿಮಾ ನೋಡಿ ಭಾವುಕರಾಗಿ ಹೊರಬಂದಿದ್ದಾರೆ.
ಮಂಗಳೂರಿನ ಭಾರತಗ ಸಿನಿಮಾ ಮಲ್ಟಿಫ್ಲೆಕ್ಸ್ನಲ್ಲಿ ಭರತ್ ಶೆಟ್ಟಿ ಅವರೇ ವೈಯಕ್ತಿಕವಾಗಿ ಎಲ್ಲರ ಟಿಕೆಟ್ಗಳನ್ನು ಖರೀದಿಸಿ ವೀಕ್ಷಣೆಗೆ ಪ್ರೋತ್ಸಾಹಿಸಿದರು. ಮೂರು ಗಂಟೆಗಳ ಕಾಲ ಸಿನಿಮಾವನ್ನ ಕಾರ್ಯಕರ್ತರೊಂದಿಗೆ ಅವರೂ ವೀಕ್ಷಿಸಿ ಹೊರಬಂದ ಭರತ್ ಶೆಟ್ಟಿ ಭಾವುಕರಾಗಿದ್ದರು.
ಈ ಹಿಂದೆ ನಿಜವಾಗಿ ನಡೆದ ಅತ್ಯಾಚಾರ, ನರಮೇಧ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಿನಿಮಾ ನೋಡಿದ ಮೇಲೆ ಕಣ್ಣಾರೆ ಕಂಡ ರೀತಿ ಇದೆ. ಈ ದೃಶ್ಯಗಳನ್ನು ನೋಡಿ ಮನಸ್ಸು ಭಾರವಾಗಿ ವಿಚಲಿತಗೊಂಡಿದೆ. ಮಾತಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಈ ಹಿಂದೆ ಸರ್ಕಾರ ಪೊಲೀಸ್ ಕಾನೂನು ಇದ್ದರೂ ಏನು ಮಾಡಲು ಸಾಧ್ಯವಾಗದೆ ಇಂತಹ ನರಮೇಧವನ್ನು ಮೌನವಾಗಿ ಸಹಿಸಿಕೊಂಡು ಇದ್ದದ್ದಾದರೂ ಯಾಕೆ ಎಂಬ ಪ್ರಶ್ನೆ ನನ್ನಲ್ಲಿ ಉದ್ಭವಿಸಿದೆ. ಇಂತಹ ಘಟನೆ ಮುಂದೆ ಮರುಕಳಿಸಬಾರದು ಎಂದರು.
ವಿದೇಶಿ ಶಕ್ತಿಗಳ ಉಗ್ರಗಾಮಿಗಳ ಕೈವಾಡ ಹಾಗೂ ಜನಾಂಗೀಯತೆಯನ್ನು ಬೆಳೆಯಲು ಬಿಡದೆ ದೇಶವನ್ನು ಸದೃಢವಾಗಿ ಬೆಳೆಸುವ ಹಾಗೂ ಕಾಶ್ಮೀರಿ ಪಂಡಿತರಿಗೆ ಅವರ ನ್ಯಾಯಯುತ ಹಕ್ಕನ್ನು ಒದಗಿಸಿಕೊಡುವ ಕೆಲಸವಾಗಬೇಕಾಗಿದೆ ಎಂದು ಪ್ರತಿಪಾದಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…