Featured

ಮಂಗಳೂರು: ದೀಪಕ್ ರಾವ್ ಸ್ಮರಣಾರ್ಥ ಬಸ್ ನಿಲ್ದಾಣಕ್ಕೆ ವಿರೋಧ ,ಕೊಲೆ ಬೆದರಿಕೆ : ಐವರ ಬಂಧನ – Vishwanews24

ಮಂಗಳೂರು: ದೀಪಕ್ ರಾವ್ ಸ್ಮರಣಾರ್ಥ ಬಸ್ ನಿಲ್ದಾಣಕ್ಕೆ ವಿರೋಧ ,ಕೊಲೆ ಬೆದರಿಕೆ : ಐವರ ಬಂಧನ – Vishwanews24

ಮಂಗಳೂರು: ದೀಪಕ್ ರಾವ್ ಸ್ಮರಣಾರ್ಥವಾಗಿ ಬಸ್ ನಿಲ್ದಾಣದ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ಕೊಲೆ ಮಾಡುವುದಾಗಿ ವಾಯ್ಸ್ ಮೆಸೇಜ್‌ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್ ಕಾಟಿಪಳ್ಳದ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ನವಾಝ್ ಯಾನೆ ಪಿಂಕಿ ನವಾಝ್ (25), ಜೋಕಟ್ಟೆಯ ಮುಹಮ್ಮದ್ ಫೈಝಲ್ (21), ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮುಹಮ್ಮದ್ ಸಫ್ವಾನ್ (23), ಕಾಟಿಪಳ್ಳ 6ನೇ ಬ್ಲಾಕ್ ನಿವಾಸಿ ಮುಹಮ್ಮದ್ ನಿಯಾಝ್ (20), ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಮುಸ್ತಫಾ (22) ಎಂದು ಗುರುತಿಸಲಾಗಿದೆ.

2018 ರಲ್ಲಿ ಕೊಲೆಯಾದ ದೀಪಕ್ ರಾವ್ ನೆನಪಿಗಾಗಿ ಕಾಟಿಪಳ್ಳದ 3ನೇ ಬ್ಲಾಕ್ ದ್ವಾರದ ಸಮೀಪದಲ್ಲಿ ಹೊಸದಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣಕ್ಕೆ ದೀಪಕ್ ಹೆಸರು ನಾಮಕರಣಕ್ಕೆ ತೀರ್ಮಾನಿಸಿದ್ದರು. ಅದರಂತೆ, ಬಸ್ ನಿಲ್ದಾಣವನ್ನು ಅಕ್ಟೋಬರ್ 2ರಂದು ಬೆಳಗ್ಗೆ 9:30ಕ್ಕೆ ಶಾಸಕ ಭರತ್ ಶೆಟ್ಟಿ ಉದ್ಘಾಟಿಸಿದ್ದರು. ಇದಾದ ಬಳಿಕ ‘ಲೋಕಂದವಾಲಾ’ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಪಿಂಕಿ ನವಾಝ್ ಹಾಗೂ ಜುನ್ನಿ ಎಂಬಾತನ ನಡುವಿನ ಸಂಭಾಷಣೆಯದ್ದು ಎನ್ನಲಾದ ಆಡಿಯೊ ತುಣುಕನ್ನು ಹಂಚಿಕೊಳ್ಳಲಾಗಿತ್ತು. ‘ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳನ್ನು ಕೊಲೆ ಮಾಡುತ್ತೇವೆ’ ಎನ್ನುವುದು ಆಡಿಯೊದಲ್ಲಿತ್ತು. ಇದು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಾಟಿಪಳ್ಳದ ಲೋಕೇಶ್ ಎಂಬವರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ತಲವಾರು, ನಾಲ್ಕು ಮೊಬೈಲ್‌ಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಜುನ್ನಿ ಸೇರಿದಂತೆ ಇನ್ನು ಹಲವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

8 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

10 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

11 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

11 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

11 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

11 hours ago