ಮಂಗಳೂರು (Vishwanews24): ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ.
ಮಹಿಳೆಯು ಪ್ರಕರಣವೊಂದಕ್ಕೆ ಸಂಬಂಧಿಸಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಆ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಹೆಡ್ ಕಾನ್ಸ್ಟೇಬಲ್ ಸಂತೋಷ್ ಆಕೆಗೆ ಅಸಭ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯಾರಲ್ಲಾದರೂ ದೂರು ನೀಡಿದರೆ ಜೀವನ ಪರ್ಯಂತ ಕೊರಗುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದರಿಂದ ಆಘಾತಗೊಂಡ ಮಹಿಳೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ದೂರು ನೀಡಿದ್ದರು.
ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಹೆಡ್ ಕಾನ್ಸ್ಟೇಬಲ್ ಸಂತೋಷ್ನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿಗೆ ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…