ಮಂಗಳೂರು: ಕೊರೊನಾ ಕಾರಣದಿಂದ ಕಳೆದೆರಡು ವರ್ಷಗಳಿಂದ ರದ್ದುಗೊಂಡಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1ರಿಂದ ಪುನರಾರಂಭವಾಗಲಿದೆ.
ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು ಮಂಗಳೂರಿನಿಂದ ದೆಹಲಿಗೆ ವಾರದಲ್ಲಿ ನಾಲ್ಕು ಬಾರಿ ಸಂಚಾರ ನಡೆಸಲಿದೆ. ಭಾನುವಾರ, ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರು-ದೆಹಲಿ ನಡುವಿನ ನೇರ ವಿಮಾನ ಸೇವೆ ಲಭ್ಯವಿರುತ್ತದೆ.
ಕೊರೊನಾದಿಂದಾಗಿ ನೇರ ವಿಮಾನ ಸೌಲಭ್ಯ ರದ್ದಾದ ಬಳಿಕ ಮಂಗಳೂರು-ದೆಹಲಿ ನಡುವೆ ಸಂಚರಿಸಬೇಕಾದ ಪ್ರಯಾಣಿಕರ ಪ್ರಯಾಣ ತೀರಾ ತ್ರಾಸದಾಯಕವಾಗಿತ್ತು. ಪ್ರಯಾಣಿಕರು ಮಂಗಳೂರಿನಿಂದ ಬೆಂಗಳೂರು, ಚೆನ್ನೈ, ಪುಣೆ ಮುಂಖಾಂತರ ದೆಹಲಿಗೆ ತೆರಳಬೇಕಾದ ಅನಿವಾರ್ಯತೆ ಕಳೆದೆರಡು ವರ್ಷಗಳಿಂದ ಎದುರಾಗಿತ್ತು. ಇದರಿಂದ ವಿಮಾನಕ್ಕೆ ಅಧಿಕ ವೆಚ್ಚ ತೆರಬೇಕಾಗಿತ್ತು. ಇದೀಗ ನೇರ ವಿಮಾನಯಾನ ಪುನರಾರಂಭವಾಗಲಿರುವುದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…