ಮಂಗಳೂರು: ಕೊರೊನಾ ಕಾರಣದಿಂದ ಕಳೆದೆರಡು ವರ್ಷಗಳಿಂದ ರದ್ದುಗೊಂಡಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1ರಿಂದ ಪುನರಾರಂಭವಾಗಲಿದೆ.
ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು ಮಂಗಳೂರಿನಿಂದ ದೆಹಲಿಗೆ ವಾರದಲ್ಲಿ ನಾಲ್ಕು ಬಾರಿ ಸಂಚಾರ ನಡೆಸಲಿದೆ. ಭಾನುವಾರ, ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರು-ದೆಹಲಿ ನಡುವಿನ ನೇರ ವಿಮಾನ ಸೇವೆ ಲಭ್ಯವಿರುತ್ತದೆ.
ಕೊರೊನಾದಿಂದಾಗಿ ನೇರ ವಿಮಾನ ಸೌಲಭ್ಯ ರದ್ದಾದ ಬಳಿಕ ಮಂಗಳೂರು-ದೆಹಲಿ ನಡುವೆ ಸಂಚರಿಸಬೇಕಾದ ಪ್ರಯಾಣಿಕರ ಪ್ರಯಾಣ ತೀರಾ ತ್ರಾಸದಾಯಕವಾಗಿತ್ತು. ಪ್ರಯಾಣಿಕರು ಮಂಗಳೂರಿನಿಂದ ಬೆಂಗಳೂರು, ಚೆನ್ನೈ, ಪುಣೆ ಮುಂಖಾಂತರ ದೆಹಲಿಗೆ ತೆರಳಬೇಕಾದ ಅನಿವಾರ್ಯತೆ ಕಳೆದೆರಡು ವರ್ಷಗಳಿಂದ ಎದುರಾಗಿತ್ತು. ಇದರಿಂದ ವಿಮಾನಕ್ಕೆ ಅಧಿಕ ವೆಚ್ಚ ತೆರಬೇಕಾಗಿತ್ತು. ಇದೀಗ ನೇರ ವಿಮಾನಯಾನ ಪುನರಾರಂಭವಾಗಲಿರುವುದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…