ಮಂಗಳೂರು: ಕೊರೊನಾ ಕಾರಣದಿಂದ ಕಳೆದೆರಡು ವರ್ಷಗಳಿಂದ ರದ್ದುಗೊಂಡಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1ರಿಂದ ಪುನರಾರಂಭವಾಗಲಿದೆ.
ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು ಮಂಗಳೂರಿನಿಂದ ದೆಹಲಿಗೆ ವಾರದಲ್ಲಿ ನಾಲ್ಕು ಬಾರಿ ಸಂಚಾರ ನಡೆಸಲಿದೆ. ಭಾನುವಾರ, ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರು-ದೆಹಲಿ ನಡುವಿನ ನೇರ ವಿಮಾನ ಸೇವೆ ಲಭ್ಯವಿರುತ್ತದೆ.
ಕೊರೊನಾದಿಂದಾಗಿ ನೇರ ವಿಮಾನ ಸೌಲಭ್ಯ ರದ್ದಾದ ಬಳಿಕ ಮಂಗಳೂರು-ದೆಹಲಿ ನಡುವೆ ಸಂಚರಿಸಬೇಕಾದ ಪ್ರಯಾಣಿಕರ ಪ್ರಯಾಣ ತೀರಾ ತ್ರಾಸದಾಯಕವಾಗಿತ್ತು. ಪ್ರಯಾಣಿಕರು ಮಂಗಳೂರಿನಿಂದ ಬೆಂಗಳೂರು, ಚೆನ್ನೈ, ಪುಣೆ ಮುಂಖಾಂತರ ದೆಹಲಿಗೆ ತೆರಳಬೇಕಾದ ಅನಿವಾರ್ಯತೆ ಕಳೆದೆರಡು ವರ್ಷಗಳಿಂದ ಎದುರಾಗಿತ್ತು. ಇದರಿಂದ ವಿಮಾನಕ್ಕೆ ಅಧಿಕ ವೆಚ್ಚ ತೆರಬೇಕಾಗಿತ್ತು. ಇದೀಗ ನೇರ ವಿಮಾನಯಾನ ಪುನರಾರಂಭವಾಗಲಿರುವುದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…