ಮಂಗಳೂರು: ದೇವಸ್ಥಾನದ ಒಳಗೆ ಜನರು ಶರ್ಟ್ ತೆಗೆದು ಹೋಗುವ ಪದ್ಧತಿಗೆ ವಿರೋಧ ಕೇಳಿಬಂದಿದೆ. ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಅವರು ಈ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
“ಶರ್ಟ್, ಬನಿಯನ್ ತೆಗೆದು ದೇವಸ್ಥಾನದ ಒಳಗೆ ಹೋಗಬೇಕು ಎನ್ನುವುದು ಅವೈಜ್ಞಾನಿಕ ಪದ್ಧತಿ ಆಗಿದೆ. ಈ ಕುರಿತು ಹಿಂದೂ ಧರ್ಮದಲ್ಲಿ ಯಾವುದೇ ಉಲ್ಲೇಖಗಳಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿಯನ್ನು ಭಕ್ತರ ಮೇಲೆ ಹೇರಲಾಗುತ್ತಿದೆ. ಶರ್ಟ್ ತೆಗೆದು ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ. ಅಂಗವಿಕಲರಿಗೆ ಈ ಪದ್ಧತಿಯಿಂದ ಮುಜುಗರವಾಗುತ್ತದೆ. ದೇವಸ್ಥಾನಗಳಲ್ಲಿ ಈ ಕುರಿತು ಹಾಕಿರುವ ಬೋರ್ಡ್ ತೆರವು ಮಾಡಬೇಕು,” ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸುಬ್ರಹ್ಮಣ್ಯ, ಕೊಲ್ಲೂರು ಸೇರಿದಂತೆ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಡಿ ಬರುವ ಕೆಲವೊಂದು ದೇವಸ್ಥಾನಗಳಲ್ಲಿ ಭಕ್ತರು ಶರ್ಟ್, ಬನಿಯನ್ ತೆಗೆದು ಒಳಗೆ ಬಿಡುತ್ತಿದ್ದಾರೆ. ಹೀಗೆ ಅವೈಜ್ಞಾನಿಕ ಪದ್ಧತಿ ಅನುಸರಿಸಲಾಗುತ್ತಿದ್ದು,ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆಲ್ಲ ತಡೆ ಹಾಕಬೇಕು ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.
“ಅನಗತ್ಯ ಪದ್ಧತಿಯಿಂದ ಗೊಂದಲ ಸೃಷ್ಟಿ”
ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದ ಒಕ್ಕೂಟ, ಹಿಂದೂ ಧರ್ಮ ಗ್ರಂಥಗಳಲ್ಲಿ ಈ ಕುರಿತು ಉಲ್ಲೇಖಗಳಿಲ್ಲ. ಇಲಾಖೆಯೂ ಈ ರೀತಿಯ ಆದೇಶ ಹೊರಡಿಸಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿ ಭಕ್ತರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಶರ್ಟ್, ಬನಿಯನ್ ತೆಗೆದು ಒಳಗೆ ಪ್ರವೇಶಿಸುವುದರಿಂದ ಒಬ್ಬರ ಮೈಗೆ ಇನ್ನೊಬ್ಬರಿಗೆ ತಾಗುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ ಒಬ್ಬರ ಮೈ ಇನ್ನೊಬ್ಬರಿಗೆ ಸ್ಪರ್ಶ ಆಗುವುದರಿಂದ ಚರ್ಮ ರೋಗಗಳು ಹರಡುವ ಸಾಧ್ಯತೆಗಳಿವೆ. ಅಂಗವಿಕಲರು ಅರೆನಗ್ನ ಸ್ಥಿತಿಯಲ್ಲಿ ಹೋಗಿ ಮುಜುಗರಕ್ಕೆ ಒಳಗಾಗಬೇಕಾಗುತ್ತಿದೆ. ಆದ್ದರಿಂದ ಈ ನಿಯಮಬಾಹಿರ ಆಚರಣೆಗೆ ಅಂತ್ಯ ಹಾಡಬೇಕು. ದೇವಾಲಯಗಳಲ್ಲಿ ಈ ಬಗ್ಗೆ ಅಳವಡಿಸಲಾಗಿರುವ ಬೋರ್ಡ್ಗಳನ್ನು ತೆರವು ಮಾಡಬೇಕು ಎಂದು ಪರಿಸರ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…