Featured

ಮಂಗಳೂರು : ದೇವಸ್ಥಾನದ ಒಳಗಡೆ ಶರ್ಟ್ ತೆಗೆದು ಹೋಗುವುದರಿಂದ ಚರ್ಮ ರೋಗ ಹರಡುತ್ತದೆ : ಶಶಿಧರ್‌ ಶೆಟ್ಟಿ – Vishwanews24

ಹಿಂದೂ ಧರ್ಮ ಗ್ರಂಥಗಳಲ್ಲಿ ಈ ಕುರಿತು ಉಲ್ಲೇಖಗಳಿಲ್ಲ..

ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿಯನ್ನು ಭಕ್ತರ ಮೇಲೆ ಹೇರಲಾಗುತ್ತಿದೆ..

ಶರ್ಟ್ ತೆಗೆದು ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ..

ದೇವಾಲಯಗಳಲ್ಲಿ ಈ ಬಗ್ಗೆ ಅಳವಡಿಸಲಾಗಿರುವ ಬೋರ್ಡ್‌ಗಳನ್ನು ತೆರವು ಮಾಡಬೇಕು..

ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಆಗ್ರಹ..

ಮಂಗಳೂರು: ದೇವಸ್ಥಾನದ ಒಳಗೆ ಜನರು ಶರ್ಟ್ ತೆಗೆದು ಹೋಗುವ ಪದ್ಧತಿಗೆ ವಿರೋಧ ಕೇಳಿಬಂದಿದೆ. ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಅವರು ಈ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

“ಶರ್ಟ್, ಬನಿಯನ್ ತೆಗೆದು ದೇವಸ್ಥಾನದ ಒಳಗೆ ಹೋಗಬೇಕು ಎನ್ನುವುದು ಅವೈಜ್ಞಾನಿಕ ಪದ್ಧತಿ ಆಗಿದೆ. ಈ ಕುರಿತು ಹಿಂದೂ ಧರ್ಮದಲ್ಲಿ ಯಾವುದೇ ಉಲ್ಲೇಖಗಳಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿಯನ್ನು ಭಕ್ತರ ಮೇಲೆ ಹೇರಲಾಗುತ್ತಿದೆ. ಶರ್ಟ್ ತೆಗೆದು ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ. ಅಂಗವಿಕಲರಿಗೆ ಈ ಪದ್ಧತಿಯಿಂದ ಮುಜುಗರವಾಗುತ್ತದೆ. ದೇವಸ್ಥಾನಗಳಲ್ಲಿ ಈ ಕುರಿತು ಹಾಕಿರುವ ಬೋರ್ಡ್ ತೆರವು ಮಾಡಬೇಕು,” ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸುಬ್ರಹ್ಮಣ್ಯ, ಕೊಲ್ಲೂರು ಸೇರಿದಂತೆ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಡಿ ಬರುವ ಕೆಲವೊಂದು ದೇವಸ್ಥಾನಗಳಲ್ಲಿ ಭಕ್ತರು ಶರ್ಟ್, ಬನಿಯನ್ ತೆಗೆದು ಒಳಗೆ ಬಿಡುತ್ತಿದ್ದಾರೆ. ಹೀಗೆ ಅವೈಜ್ಞಾನಿಕ ಪದ್ಧತಿ ಅನುಸರಿಸಲಾಗುತ್ತಿದ್ದು,ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆಲ್ಲ ತಡೆ ಹಾಕಬೇಕು ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.

“ಅನಗತ್ಯ ಪದ್ಧತಿಯಿಂದ ಗೊಂದಲ ಸೃಷ್ಟಿ”

ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದ ಒಕ್ಕೂಟ, ಹಿಂದೂ ಧರ್ಮ ಗ್ರಂಥಗಳಲ್ಲಿ ಈ ಕುರಿತು ಉಲ್ಲೇಖಗಳಿಲ್ಲ. ಇಲಾಖೆಯೂ ಈ ರೀತಿಯ ಆದೇಶ ಹೊರಡಿಸಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿ ಭಕ್ತರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಶರ್ಟ್, ಬನಿಯನ್ ತೆಗೆದು ಒಳಗೆ ಪ್ರವೇಶಿಸುವುದರಿಂದ ಒಬ್ಬರ ಮೈಗೆ ಇನ್ನೊಬ್ಬರಿಗೆ ತಾಗುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ ಒಬ್ಬರ ಮೈ ಇನ್ನೊಬ್ಬರಿಗೆ ಸ್ಪರ್ಶ ಆಗುವುದರಿಂದ ಚರ್ಮ ರೋಗಗಳು ಹರಡುವ ಸಾಧ್ಯತೆಗಳಿವೆ. ಅಂಗವಿಕಲರು ಅರೆನಗ್ನ ಸ್ಥಿತಿಯಲ್ಲಿ ಹೋಗಿ ಮುಜುಗರಕ್ಕೆ ಒಳಗಾಗಬೇಕಾಗುತ್ತಿದೆ. ಆದ್ದರಿಂದ ಈ ನಿಯಮಬಾಹಿರ ಆಚರಣೆಗೆ ಅಂತ್ಯ ಹಾಡಬೇಕು. ದೇವಾಲಯಗಳಲ್ಲಿ ಈ ಬಗ್ಗೆ ಅಳವಡಿಸಲಾಗಿರುವ ಬೋರ್ಡ್‌ಗಳನ್ನು ತೆರವು ಮಾಡಬೇಕು ಎಂದು ಪರಿಸರ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.

ಮಂಗಳೂರು : ಇನ್ ಸ್ಟಾಗ್ರಾಂನಲ್ಲಿ ಪರಿಚಯ ಪ್ರೀತಿಸಿ ಮದುವೆ .. ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿ.. 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago