Featured

ಮಂಗಳೂರು : ದೇವಸ್ಥಾನದ ಒಳಗಡೆ ಶರ್ಟ್ ತೆಗೆದು ಹೋಗುವುದರಿಂದ ಚರ್ಮ ರೋಗ ಹರಡುತ್ತದೆ : ಶಶಿಧರ್‌ ಶೆಟ್ಟಿ – Vishwanews24

ಹಿಂದೂ ಧರ್ಮ ಗ್ರಂಥಗಳಲ್ಲಿ ಈ ಕುರಿತು ಉಲ್ಲೇಖಗಳಿಲ್ಲ..

ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿಯನ್ನು ಭಕ್ತರ ಮೇಲೆ ಹೇರಲಾಗುತ್ತಿದೆ..

ಶರ್ಟ್ ತೆಗೆದು ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ..

ದೇವಾಲಯಗಳಲ್ಲಿ ಈ ಬಗ್ಗೆ ಅಳವಡಿಸಲಾಗಿರುವ ಬೋರ್ಡ್‌ಗಳನ್ನು ತೆರವು ಮಾಡಬೇಕು..

ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಆಗ್ರಹ..

ಮಂಗಳೂರು: ದೇವಸ್ಥಾನದ ಒಳಗೆ ಜನರು ಶರ್ಟ್ ತೆಗೆದು ಹೋಗುವ ಪದ್ಧತಿಗೆ ವಿರೋಧ ಕೇಳಿಬಂದಿದೆ. ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಅವರು ಈ ಬಗ್ಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

“ಶರ್ಟ್, ಬನಿಯನ್ ತೆಗೆದು ದೇವಸ್ಥಾನದ ಒಳಗೆ ಹೋಗಬೇಕು ಎನ್ನುವುದು ಅವೈಜ್ಞಾನಿಕ ಪದ್ಧತಿ ಆಗಿದೆ. ಈ ಕುರಿತು ಹಿಂದೂ ಧರ್ಮದಲ್ಲಿ ಯಾವುದೇ ಉಲ್ಲೇಖಗಳಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿಯನ್ನು ಭಕ್ತರ ಮೇಲೆ ಹೇರಲಾಗುತ್ತಿದೆ. ಶರ್ಟ್ ತೆಗೆದು ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ. ಅಂಗವಿಕಲರಿಗೆ ಈ ಪದ್ಧತಿಯಿಂದ ಮುಜುಗರವಾಗುತ್ತದೆ. ದೇವಸ್ಥಾನಗಳಲ್ಲಿ ಈ ಕುರಿತು ಹಾಕಿರುವ ಬೋರ್ಡ್ ತೆರವು ಮಾಡಬೇಕು,” ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯದರ್ಶಿ ಶಶಿಧರ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸುಬ್ರಹ್ಮಣ್ಯ, ಕೊಲ್ಲೂರು ಸೇರಿದಂತೆ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಡಿ ಬರುವ ಕೆಲವೊಂದು ದೇವಸ್ಥಾನಗಳಲ್ಲಿ ಭಕ್ತರು ಶರ್ಟ್, ಬನಿಯನ್ ತೆಗೆದು ಒಳಗೆ ಬಿಡುತ್ತಿದ್ದಾರೆ. ಹೀಗೆ ಅವೈಜ್ಞಾನಿಕ ಪದ್ಧತಿ ಅನುಸರಿಸಲಾಗುತ್ತಿದ್ದು,ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆಲ್ಲ ತಡೆ ಹಾಕಬೇಕು ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.

“ಅನಗತ್ಯ ಪದ್ಧತಿಯಿಂದ ಗೊಂದಲ ಸೃಷ್ಟಿ”

ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದ ಒಕ್ಕೂಟ, ಹಿಂದೂ ಧರ್ಮ ಗ್ರಂಥಗಳಲ್ಲಿ ಈ ಕುರಿತು ಉಲ್ಲೇಖಗಳಿಲ್ಲ. ಇಲಾಖೆಯೂ ಈ ರೀತಿಯ ಆದೇಶ ಹೊರಡಿಸಿಲ್ಲ. ಅವಾಸ್ತವಿಕ ಮತ್ತು ಅನಗತ್ಯ ಪದ್ಧತಿ ಭಕ್ತರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಶರ್ಟ್, ಬನಿಯನ್ ತೆಗೆದು ಒಳಗೆ ಪ್ರವೇಶಿಸುವುದರಿಂದ ಒಬ್ಬರ ಮೈಗೆ ಇನ್ನೊಬ್ಬರಿಗೆ ತಾಗುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ ಒಬ್ಬರ ಮೈ ಇನ್ನೊಬ್ಬರಿಗೆ ಸ್ಪರ್ಶ ಆಗುವುದರಿಂದ ಚರ್ಮ ರೋಗಗಳು ಹರಡುವ ಸಾಧ್ಯತೆಗಳಿವೆ. ಅಂಗವಿಕಲರು ಅರೆನಗ್ನ ಸ್ಥಿತಿಯಲ್ಲಿ ಹೋಗಿ ಮುಜುಗರಕ್ಕೆ ಒಳಗಾಗಬೇಕಾಗುತ್ತಿದೆ. ಆದ್ದರಿಂದ ಈ ನಿಯಮಬಾಹಿರ ಆಚರಣೆಗೆ ಅಂತ್ಯ ಹಾಡಬೇಕು. ದೇವಾಲಯಗಳಲ್ಲಿ ಈ ಬಗ್ಗೆ ಅಳವಡಿಸಲಾಗಿರುವ ಬೋರ್ಡ್‌ಗಳನ್ನು ತೆರವು ಮಾಡಬೇಕು ಎಂದು ಪರಿಸರ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.

ಮಂಗಳೂರು : ಇನ್ ಸ್ಟಾಗ್ರಾಂನಲ್ಲಿ ಪರಿಚಯ ಪ್ರೀತಿಸಿ ಮದುವೆ .. ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿ.. 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

18 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

18 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago