ಮಂಗಳೂರು: ಮಂಗಳಾದೇವಿ ದೇವಸ್ಥಾನ ಜಾತ್ರೆಯ ಅಂಗಡಿಗಳಲ್ಲಿ ಕೇಸರಿ ಧ್ವಜ ಹಾಕಿರುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗವುದು. ಇದು ಸಂವಿಧಾನ ಆಧಾರಿತ ದೇಶವೇ ಹೊರತು ಧರ್ಮಾಧಾರಿತ ದೇಶ ಅಲ್ಲ. ಯಾರನ್ನೂ ಯಾರಿಗೂ ನಿರ್ಬಂಧ ಮಾಡಲು ಸಾಧ್ಯ ಇಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅವರು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಆಧಾರ ಇಲ್ಲದೆ ಮಾತನಾಡುವುದು ಬಿಜೆಪಿ ಚಾಳಿ ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆ ವಿಚಾರವಾಗಿ ವಿಪಕ್ಷ ಬಿಜೆಪಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕ ಜನತೆ ಬಿಜೆಪಿ ಆಡಳಿತವನ್ನು ಕಂಡಿದ್ದಾರೆ. ಇದೀಗ ಬಿಜೆಪಿ ಪಂಚ ರಾಜ್ಯ ಚುನಾವಣೆಯಲ್ಲಿ ತಮಗೆ ಸೋಲಾಗುವುದನ್ನು ಅರಿತು ಕಾಂಗ್ರೆಸ್ ಗೆ ಮಸಿ ಬಳಿಯುವ ನಿಟ್ಟಿನಲ್ಲಿ ಸುಳ್ಳು ಹೇಳುತ್ತಿದೆ. ಐಟಿ, ಸಿಬಿಐ, ಇಡಿ ಸಹಿತ ತನಿಖಾ ಸಂಸ್ಥೆಗಳು ಅವರ ಕೈಯಲ್ಲಿದೆ. ಆಧಾರ ಇಲ್ಲದೆ ಮಾತನಾಡುವುದು ಬಿಜೆಪಿ ಚಾಳಿ ಎಂದು ಟೀಕಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…