ಮಂಗಳೂರು: ಇಂದಿರಾ ಗಾಂಧಿ ಕಾಂಗ್ರೇಸ್ ಪಕ್ಷದ ಶ್ರೇಷ್ಠ ನಾಯಕಿ, ದುರ್ಬಲ ವರ್ಗದ ಜನರ ಪರವಾಗಿ ಕೆಲಸ ಮಾಡಿದವರು. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಹೇಳಿ ಇಂದು ವಿರೋಧ ಪಕ್ಷಗಳು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅವರನ್ನು ಅಪಹಾಸ್ಯ ಮಾಡುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವರಾದ ರಮಾನಾಥ ರೈ ದಕ್ಷಿಣ ಕನ್ನಡ ಕಾಂಗ್ರೇಸ್ ಜಿಲ್ಲಾ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದುದರಿಂದ ಸಾಕಷ್ಟು ಪ್ರಮಾಣದಲ್ಲಿ ಲಾಭವೇ ಆಗಿದೆ. ಬ್ಯಾಂಕ್ ರಾಷ್ಟ್ರೀಕರಣವಾಗಿದೆ, ಭೂ ಸುಧಾರಣಾ ಕ್ರಮ ಜಾರಿಗೆ ಬಂದಿದೆ , ಬಡವರ ನಿವೇಶನ ನಿರ್ಮಾಣಕ್ಕೆವಾಗಿದೆ. ದಕ್ಷಿಣ ಕನ್ನಡ ಜನರಿಗೂ ಇದರಿಂದ ಸಾಕಷ್ಟು ಲಾಭ ಉಂಟಾಗಿದೆ. ಒಂದು ವೇಳೆ ಈ ಭಾಗದ ಜನರಿಗೆ ತುರ್ತು ಪರಿಸ್ಥಿತಿಯಿಂದ ಸಮಸ್ಯೆ ಉಂಟಾಗಿದ್ದರೆ ಲೋಕ ಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಈ ಭಾಗದಲ್ಲಿ ಗೆಲ್ಲುತ್ತಿರಲ್ಲಿಲ್ಲ. ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಈ ಜಿಲ್ಲೆಗೆ ಇಂದಿರಾ ಗಾಂಧಿಯವರ ಋಣ ಭಾರ ಇದೆ . ಬಡವರಿಗೆ, ಸಾಮಾನ್ಯರಿಗೆ ತುರ್ತು ಪರಿಸ್ಥಿತಿ ಇಂದ ಯಾವುದೇ ರೀತಿಯ ತೊಂದರೆ ಆಗದೆ ಅಭಿವೃದ್ದಿ ಕಾರ್ಯಕ್ಕೆ ಇನ್ನಷ್ಟು ವೇಗ ಸಿಕ್ಕಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ನವೀನ್ ಡಿಸೋಜಾ, ಹಬ್ಬಾಸ್ ಅಲಿ , ಅಖಿಲತಾ, ನವಾಝ್ ಮುಂತಾದವರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…