Featured

ಮಂಗಳೂರು: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಇಂದಿರಾ ಗಾಂಧಿ ಅವರನ್ನು ಅಪಹಾಸ್ಯ ಮಾಡುವ ಕ್ರಮ ಸರಿಯಲ್ಲ : ರಮಾನಾಥ ರೈ – vishwanews24

ಇಂದಿರಾ ಗಾಂಧಿಯವರು ಹೇರಿದ್ದ ತುರ್ತು ಪರಿಸ್ಥಿತಿಯಿಂದ ದೇಶದಲ್ಲಿ ಬಡವರಿಗೆ ಲಾಭವೇ ಆಗಿದೆ : ರಮಾನಾಥ ರೈ

ಮಂಗಳೂರು: ಇಂದಿರಾ ಗಾಂಧಿ ಕಾಂಗ್ರೇಸ್ ಪಕ್ಷದ ಶ್ರೇಷ್ಠ ನಾಯಕಿ, ದುರ್ಬಲ ವರ್ಗದ ಜನರ ಪರವಾಗಿ ಕೆಲಸ ಮಾಡಿದವರು. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಹೇಳಿ ಇಂದು ವಿರೋಧ ಪಕ್ಷಗಳು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅವರನ್ನು ಅಪಹಾಸ್ಯ ಮಾಡುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವರಾದ ರಮಾನಾಥ ರೈ ದಕ್ಷಿಣ ಕನ್ನಡ ಕಾಂಗ್ರೇಸ್ ಜಿಲ್ಲಾ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದುದರಿಂದ ಸಾಕಷ್ಟು ಪ್ರಮಾಣದಲ್ಲಿ ಲಾಭವೇ ಆಗಿದೆ. ಬ್ಯಾಂಕ್ ರಾಷ್ಟ್ರೀಕರಣವಾಗಿದೆ, ಭೂ ಸುಧಾರಣಾ ಕ್ರಮ ಜಾರಿಗೆ ಬಂದಿದೆ , ಬಡವರ ನಿವೇಶನ ನಿರ್ಮಾಣಕ್ಕೆವಾಗಿದೆ. ದಕ್ಷಿಣ ಕನ್ನಡ ಜನರಿಗೂ ಇದರಿಂದ ಸಾಕಷ್ಟು ಲಾಭ ಉಂಟಾಗಿದೆ. ಒಂದು ವೇಳೆ ಈ ಭಾಗದ ಜನರಿಗೆ ತುರ್ತು ಪರಿಸ್ಥಿತಿಯಿಂದ ಸಮಸ್ಯೆ ಉಂಟಾಗಿದ್ದರೆ ಲೋಕ ಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಈ ಭಾಗದಲ್ಲಿ ಗೆಲ್ಲುತ್ತಿರಲ್ಲಿಲ್ಲ. ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಈ ಜಿಲ್ಲೆಗೆ ಇಂದಿರಾ ಗಾಂಧಿಯವರ ಋಣ ಭಾರ ಇದೆ . ಬಡವರಿಗೆ, ಸಾಮಾನ್ಯರಿಗೆ ತುರ್ತು ಪರಿಸ್ಥಿತಿ ಇಂದ ಯಾವುದೇ ರೀತಿಯ ತೊಂದರೆ ಆಗದೆ ಅಭಿವೃದ್ದಿ ಕಾರ್ಯಕ್ಕೆ ಇನ್ನಷ್ಟು ವೇಗ ಸಿಕ್ಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನವೀನ್ ಡಿಸೋಜಾ, ಹಬ್ಬಾಸ್ ಅಲಿ , ಅಖಿಲತಾ, ನವಾಝ್ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago