ಮಂಗಳೂರು: ಇಂದಿರಾ ಗಾಂಧಿ ಕಾಂಗ್ರೇಸ್ ಪಕ್ಷದ ಶ್ರೇಷ್ಠ ನಾಯಕಿ, ದುರ್ಬಲ ವರ್ಗದ ಜನರ ಪರವಾಗಿ ಕೆಲಸ ಮಾಡಿದವರು. ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಹೇಳಿ ಇಂದು ವಿರೋಧ ಪಕ್ಷಗಳು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅವರನ್ನು ಅಪಹಾಸ್ಯ ಮಾಡುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವರಾದ ರಮಾನಾಥ ರೈ ದಕ್ಷಿಣ ಕನ್ನಡ ಕಾಂಗ್ರೇಸ್ ಜಿಲ್ಲಾ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದುದರಿಂದ ಸಾಕಷ್ಟು ಪ್ರಮಾಣದಲ್ಲಿ ಲಾಭವೇ ಆಗಿದೆ. ಬ್ಯಾಂಕ್ ರಾಷ್ಟ್ರೀಕರಣವಾಗಿದೆ, ಭೂ ಸುಧಾರಣಾ ಕ್ರಮ ಜಾರಿಗೆ ಬಂದಿದೆ , ಬಡವರ ನಿವೇಶನ ನಿರ್ಮಾಣಕ್ಕೆವಾಗಿದೆ. ದಕ್ಷಿಣ ಕನ್ನಡ ಜನರಿಗೂ ಇದರಿಂದ ಸಾಕಷ್ಟು ಲಾಭ ಉಂಟಾಗಿದೆ. ಒಂದು ವೇಳೆ ಈ ಭಾಗದ ಜನರಿಗೆ ತುರ್ತು ಪರಿಸ್ಥಿತಿಯಿಂದ ಸಮಸ್ಯೆ ಉಂಟಾಗಿದ್ದರೆ ಲೋಕ ಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಈ ಭಾಗದಲ್ಲಿ ಗೆಲ್ಲುತ್ತಿರಲ್ಲಿಲ್ಲ. ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ಈ ಜಿಲ್ಲೆಗೆ ಇಂದಿರಾ ಗಾಂಧಿಯವರ ಋಣ ಭಾರ ಇದೆ . ಬಡವರಿಗೆ, ಸಾಮಾನ್ಯರಿಗೆ ತುರ್ತು ಪರಿಸ್ಥಿತಿ ಇಂದ ಯಾವುದೇ ರೀತಿಯ ತೊಂದರೆ ಆಗದೆ ಅಭಿವೃದ್ದಿ ಕಾರ್ಯಕ್ಕೆ ಇನ್ನಷ್ಟು ವೇಗ ಸಿಕ್ಕಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ನವೀನ್ ಡಿಸೋಜಾ, ಹಬ್ಬಾಸ್ ಅಲಿ , ಅಖಿಲತಾ, ನವಾಝ್ ಮುಂತಾದವರು ಉಪಸ್ಥಿತರಿದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…