ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ದೇಶ ಈಗ ಅತ್ಯಂತ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದೆ. ದೇಶವನ್ನು ಮರುನಿರ್ಮಾಣ ಮಾಡಬೇಕಾಗಿದೆ. ದೇಶಕ್ಕೆ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಹೀಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸಿದ್ದಾರೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಬ್ಲಾಕ್, ಜಿಲ್ಲಾ ಪದಾಧಿಕಾರಿಗಳ ಚುನಾವಣೆ ನಿಗದಿಯಾಗಿದ್ದು, ಈಗ ಸದಸ್ಯತ್ವ ನೋಂದಣಿ ಮಾಡಿಕೊಂಡರೆ ಮತದಾನದ ಹಕ್ಕು ನೀಡಲಾಗುವುದು. ಇದಕ್ಕಾಗಿ 40 ಬೂತ್ಗಳಿಗೆ ಒಬ್ಬ ಮುಖ್ಯ ನೋಂದಣಿದಾರರನ್ನು ನೇಮಕ ಮಾಡಿದ್ದೇವೆ. ಮುಂದಿನ ಚುನಾವಣೆ ಸಂದರ್ಭ ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಸದಸ್ಯರ ಅಭಿಪ್ರಾಯ ಕೇಳಲು ಅನುಕೂಲವಾಗಲಿದೆ. ಕಾಂಗ್ರೆಸ್ ಕಾರ್ಯಕರ್ತರ ಭಾವನೆ ಪಕ್ಷದ ರಾಜ್ಯಾಧ್ಯಕ್ಷರ ಭಾವನೆಯಾಗಬೇಕು. ಯಾರು ನಮ್ಮ ನಾಯಕರಾಗಬೇಕು ಎಂಬುದರ ಬಗ್ಗೆ ಕಾರ್ಯಕರ್ತರ ಅಭಿಪ್ರಾಯವನ್ನು ಆನ್ಲೈನ್ ಮೂಲಕ ಸಂಗ್ರಹಿಸಲು ಅನುಕೂಲವಾಗುವಂತೆ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಾರಂಭಿಸಿದ್ದೇವೆ ಎಂದರು.
ಇನ್ನು ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವದಲ್ಲಿ ನಂಬಿಕೆ ಇರುವವರು 5 ರೂ. ಕೊಟ್ಟು ಸದಸ್ಯರಾಗಬಹುದು. ಗುರುತಿನ ಚೀಟಿ ಪಡೆಯಲು ಇಚ್ಛಿಸುವವರು ಜಿಲ್ಲಾ ಕಾಂಗ್ರೆಸ್ ನಲ್ಲಿ 10 ರೂ. ನೀಡಿ ಪಡೆಯಬಹುದು. ಸದಸ್ಯತ್ವ ವಿಚಾರದಲ್ಲಿ ಮುಖ್ಯ ನೋಂದಣಿದಾರರನ್ನು ಭೇಟಿ ಮಾಡಿ, ಪ್ರತಿಯೊಬ್ಬರಿಗೂ ಬೂತ್ಗಳನ್ನು ಹಂಚಲು, ಅವರೊಂದಿಗೆ ಚರ್ಚೆ ಮಾಡಲು ಮಂಗಳೂರು ಹಾಗೂ ಉಡುಪಿಗೆ ಭೇಟಿ ನೀಡುತ್ತಿದ್ದೇನೆ ಎಂದಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…