ಮಂಗಳೂರು: ವಿಧಾನ ಸೌದದಲ್ಲಿ ಪಾಕಿಸ್ತಾನ ಘೋಷಣೆ, ಬೆಂಗಳೂರು ಸ್ಫೋಟ ಮೊದಲಾದ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಆದರೆ ಇಂತಹ ವಿಷಯಗಳಲ್ಲಿ ಒಟ್ಟಾಗಿ ನಿಲ್ಲಬೇಕೇ ಹೊರತು ರಾಜಕೀಯ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡೂ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದಕ್ಕೂ ಮೊದಲೇ ಬಿಜೆಪಿ ತನ್ನ ಬೇಳೆ ಬೇಯಿಸಿಕೊಳ್ಳತೊಡಗಿದೆ. ಇದು ದೇಶದ ಹಿತ ದೃಷ್ಟಿಯಿಂದ ಮಾರಕ ಎಂದು ಅವರು ಹೇಳಿದರು.
ಇಂತಹ ದೇಶದ್ರೋಹದ ಚಟುವಟಿಕೆಗಳಿಗೆ ಯಾರಾದರೂ ಪ್ರೋತ್ಸಾಹ ನೀಡುತ್ತಾರಾ ಎಂದು ಪ್ರಶ್ನಿಸಿದ ಗುಂಡೂರಾವ್, ಇಂತಹ ಘಟನೆ ಮುಂದಿಟ್ಟು ಪ್ರಚೋದಿಸುವ ಅಗತ್ಯವಿಲ್ಲ ಎಂದರು.
ಇದು ಸರಕಾರದ ವೈಫಲ್ಯ ಅಲ್ಲವೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸಿದ ಸಚಿವರು, ಈ ಹಿಂದಿನ ಸರಕಾರದ ಅವಧಿಯಲ್ಲೂ ಈ ರೀತಿಯ ಘಟನೆಗಳು ನಡೆದಿವೆ. ಪುಲ್ವಾಮ ಘಟನೆಯಾದಾಗ ಯಾವ ಸರಕಾರವಿತ್ತು. ಯೋಧರು ಹುತಾತ್ಮರಾಗಿದ್ದು ಹೇಗೆ? ಭಾರೀ ಪ್ರಮಾಣದ ಆರ್ಡಿಎಕ್ಸ್ ಹೇಗೆ ಒಳಗೆ ಬಂತು ಎಂದು ಪ್ರಶ್ನಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…