ಮಂಗಳೂರು : ದೇಶದ ಹಿತಕ್ಕಾಗಿ ಎನ್ ಐಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಿ  : ಶಾಸಕ ಡಾ. ಭರತ್ ಶೆಟ್ಟಿ – Vishwanews24

Featured, ದಕ್ಷಿಣ ಕನ್ನಡ

ಮುಸ್ಲಿಂ ಯುವಕರಿಗೆ ಉಗ್ರ ಕೃತ್ಯ ನಡೆಸಲು ಹಣಕಾಸು ಬೆಂಬಲ ನೀಡುವ ಜನರನ್ನು, ಹಾಗೂ ಸಂಘಟನೆಗಳನ್ನು ಬಹಿಷ್ಕರಿಸಿ 

ದೇಶದ ಹಿತಕ್ಕಾಗಿ ಎನ್ ಐಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಿ 

ಮಂಗಳೂರು: ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು, ಮುಸ್ಲಿಂ ಮುಖಂಡರು ಖಂಡಿಸುವ ಮೂಲಕ ಮತ್ತು ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ, ಬೆಂಬಲ ನೀಡಿದ ಜನರನ್ನು, ಹಾಗೂ ಸಂಘಟನೆಗಳನ್ನು ಬಹಿಷ್ಕರಿಸಿ ದೂರವಿಡುವ ಮೂಲಕ ದೇಶದ ಹಿತಕ್ಕಾಗಿ ಎನ್ ಐಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಬೇಕಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.

ಮಂಗಳೂರು ಸ್ಪೋಟಕ್ಕೆ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಹೊಣೆ ಹೊತ್ತಿದೆ. ಸರಕಾರ ಉಗ್ರ ನಿಗ್ರಹಕ್ಕೆ ಬೇಕಾದ ಕ್ರಮ ಕೈಗೊಳ್ಳುತ್ತದೆ. ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಸಮುದಾಯದ ನಾಯಕರು ಗುರುತಿಸಿ ಮಾಹಿತಿ ನೀಡಿ ಇಂತಹ ಕೃತ್ಯ ಮುಂದೆ ನಡೆಯದಂತೆ ಎಚ್ಚೆತ್ತುಕೊಳ್ಳಬೇಕು. ಸಾಮರಸ್ಯ, ಭ್ರಾತೃತ್ವ ಕೇವಲ ಬಾಯಿ ಮಾತಾಗದಿರಲಿ. ಆಡಿದ್ದನ್ನು ಮಾಡಿ ತೋರಿಸುವ ಗುಣವೂ ಇರಬೇಕಿದೆ ಎಂದು ಹೇಳಿದ್ದಾರೆ.

ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ – Vishwanews24

ರಾಜ್ಯದಲ್ಲಿ ಕೆ ಜಿ ಹಳ್ಳಿ, ಡಿ ಜೆ ಹಳ್ಳಿ ಘಟನೆ ನಡೆದಾಗಲೇ ಎಚ್ಚೆತ್ತುಕೊಂಡು ಮುಸ್ಲಿಂ ಮುಖಂಡರು ಸಮುದಾಯದಲ್ಲಿ ಮತಾಂಧತೆಯನ್ನು ಹೆಚ್ಚಿಸಿಕೊಂಡು ದಾರಿ ತಪ್ಪಿದ, ಭಯೋತ್ಪಾದನೆಯಲ್ಲಿ ನಿರತವಾಗಿರುವವರ ಗೌಪ್ಯ ಮಾಹಿತಿಯನ್ನು ಎನ್ ಐಎಗೆ ನೀಡಬೇಕಿತ್ತು. ಇದನ್ನು ಸಮುದಾಯ ನಿರ್ಲಕ್ಷಿಸಿದ್ದರಿಂದಲೇ ಮಂಗಳೂರು ಘಟನೆ ನಡೆಯಲು ಕಾರಣವಾಗಿದೆ.

ದೇಶ, ವಿದೇಶದಿಂದ ಹಣ ಪಡೆದು, ಭಯೋತ್ಪಾದನೆಯನ್ನು ನಡೆಸುತ್ತಿರುವುದರ ಘಟನೆಗಳನ್ನು ಸಮುದಾಯದ ನಾಯಕರು ಗಂಭೀರವಾಗಿ ಪರಿಗಣಿಸದೆ ಇದ್ದ ಪರಿಣಾಮ ಮಂಗಳೂರಿನಲ್ಲಿ ಭಾರೀ ಅನಾಹುತದ ಸಂಚು ರೂಪಿತವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ.

ಕಿಚ್ಚ ಸುದೀಪ್ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿ ನೇಮಕ : ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ – Vishwanews24

Leave a Reply