ಮಂಗಳೂರು : ದೈವಗಳ ವೇಷಹಾಕಿ ಅಶ್ಲೀಲ ನೃತ್ಯ –  ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ದೈವ ಆರಾಧಕರು – vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನ.. 

ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ.. 

ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ.. 

ಕೆಲವು ಕಿಡಿಗೇಡಿಗಳಿಂದ ಹಣ ಸಂಪಾದನೆಗೆ ದೈವಗಳ‌ ವೇಷ.. 

ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿ ​ದಯಾನಂದ ಕತ್ತಲ್ಸಾರ್ ಎಚ್ಚರಿಕೆ

ಮಂಗಳೂರು: ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನವಾಗುತ್ತಿದೆ. ಮನರಂಜನೆಗಾಗಿ ದೈವಾರಾಧನೆ ಬಳಸುತ್ತಿದ್ದಾರೆ ಎಂದು ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ನೃತ್ಯ ಮಾಡಲಾಗುತ್ತಿದೆ. ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳು ಹಣ ಸಂಪಾದನೆಗೆ ದೈವಗಳ‌ ವೇಷತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ ಇದೂಂದು ದಂಧೆಯಾಗಿ ಶುರುವಾಗಿದೆ.

ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಎಚ್‌ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಘೋಷಣೆ – vishwanews24

 

ಇದರಿಂದ ಪಂಬದ, ಪರವ, ನಲಿಕೆ ಸಮುದಾಯದವರಿಗೆ ಅವಮಾನವಾಗುತ್ತಿದೆ ಎಂದು ದೈವ ಪಾತ್ರಿಗಳು ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.

ಇನ್ನು ಮುಂದೆ ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿಯೂ ​ದಯಾನಂದ ಕತ್ತಲ್ಸಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಜೊತೆಗೆ ಅಪಚಾರದ ಬಗ್ಗೆ ಧ್ವನಿ ಎತ್ತುವಂತೆ ನಟ ರಿಷಭ್​ ಶೆಟ್ಟಿಗೆ ಒತ್ತಾಯ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಕ್ರಮಕೈಗೊಳ್ಳದಿದ್ದರೆ ದೈವಾರಾಧಕರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ವರಿಕೆ ನೀಡಿದ್ದಾರೆ.

ನಾಳೆಯಿಂದ ಕಟೀಲು ಯಕ್ಷಗಾನ ಮಂಡಳಿ ಆರೂ ಮೇಳಗಳ ತಿರುಗಾಟ ಆರಂಭ – vishwanews24

Leave a Reply