ಮಂಗಳೂರು: ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನವಾಗುತ್ತಿದೆ. ಮನರಂಜನೆಗಾಗಿ ದೈವಾರಾಧನೆ ಬಳಸುತ್ತಿದ್ದಾರೆ ಎಂದು ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ನೃತ್ಯ ಮಾಡಲಾಗುತ್ತಿದೆ. ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳು ಹಣ ಸಂಪಾದನೆಗೆ ದೈವಗಳ ವೇಷತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ ಇದೂಂದು ದಂಧೆಯಾಗಿ ಶುರುವಾಗಿದೆ.
ಇದರಿಂದ ಪಂಬದ, ಪರವ, ನಲಿಕೆ ಸಮುದಾಯದವರಿಗೆ ಅವಮಾನವಾಗುತ್ತಿದೆ ಎಂದು ದೈವ ಪಾತ್ರಿಗಳು ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.
ಇನ್ನು ಮುಂದೆ ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿಯೂ ದಯಾನಂದ ಕತ್ತಲ್ಸಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಜೊತೆಗೆ ಅಪಚಾರದ ಬಗ್ಗೆ ಧ್ವನಿ ಎತ್ತುವಂತೆ ನಟ ರಿಷಭ್ ಶೆಟ್ಟಿಗೆ ಒತ್ತಾಯ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಕ್ರಮಕೈಗೊಳ್ಳದಿದ್ದರೆ ದೈವಾರಾಧಕರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ವರಿಕೆ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…