Featured

ಮಂಗಳೂರು : ದೈವಗಳ ವೇಷಹಾಕಿ ಅಶ್ಲೀಲ ನೃತ್ಯ –  ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ದೈವ ಆರಾಧಕರು – vishwanews24

ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನ..

ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ..

ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ..

ಕೆಲವು ಕಿಡಿಗೇಡಿಗಳಿಂದ ಹಣ ಸಂಪಾದನೆಗೆ ದೈವಗಳ‌ ವೇಷ..

ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿ ​ದಯಾನಂದ ಕತ್ತಲ್ಸಾರ್ ಎಚ್ಚರಿಕೆ

ಮಂಗಳೂರು: ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನವಾಗುತ್ತಿದೆ. ಮನರಂಜನೆಗಾಗಿ ದೈವಾರಾಧನೆ ಬಳಸುತ್ತಿದ್ದಾರೆ ಎಂದು ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ನೃತ್ಯ ಮಾಡಲಾಗುತ್ತಿದೆ. ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳು ಹಣ ಸಂಪಾದನೆಗೆ ದೈವಗಳ‌ ವೇಷತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ ಇದೂಂದು ದಂಧೆಯಾಗಿ ಶುರುವಾಗಿದೆ.

 

ಇದರಿಂದ ಪಂಬದ, ಪರವ, ನಲಿಕೆ ಸಮುದಾಯದವರಿಗೆ ಅವಮಾನವಾಗುತ್ತಿದೆ ಎಂದು ದೈವ ಪಾತ್ರಿಗಳು ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.

ಇನ್ನು ಮುಂದೆ ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿಯೂ ​ದಯಾನಂದ ಕತ್ತಲ್ಸಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಜೊತೆಗೆ ಅಪಚಾರದ ಬಗ್ಗೆ ಧ್ವನಿ ಎತ್ತುವಂತೆ ನಟ ರಿಷಭ್​ ಶೆಟ್ಟಿಗೆ ಒತ್ತಾಯ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಕ್ರಮಕೈಗೊಳ್ಳದಿದ್ದರೆ ದೈವಾರಾಧಕರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ವರಿಕೆ ನೀಡಿದ್ದಾರೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

56 minutes ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

2 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

23 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

24 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago