ಮಂಗಳೂರು: ತುಳುನಾಡಿನ ಜನರು ಆರಾಧನೆ ಮಾಡುವ ದೈವಗಳಿಗೆ ಭಾರೀ ಅವಮಾನವಾಗುತ್ತಿದೆ. ಮನರಂಜನೆಗಾಗಿ ದೈವಾರಾಧನೆ ಬಳಸುತ್ತಿದ್ದಾರೆ ಎಂದು ತುಳುನಾಡಿನ ದೈವ ಪಾತ್ರಿಗಳು ಮತ್ತು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮನರಂಜನೆಗಾಗಿ ತುಳುನಾಡಿನ ದೈವಾರಾಧನೆ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕಾರ್ಯಕ್ರಮದಲ್ಲಿ ತುಳುನಾಡ ದೈವಗಳ ವೇಷಹಾಕಿ ನೃತ್ಯ ಮಾಡಲಾಗುತ್ತಿದೆ. ಭೂತ ಬಿಡಿಸಲು ತುಳುನಾಡ ದೈವಗಳಂತೆ ವೇಷತೊಟ್ಟು ನರ್ತನ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳು ಹಣ ಸಂಪಾದನೆಗೆ ದೈವಗಳ ವೇಷತೊಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ ಇದೂಂದು ದಂಧೆಯಾಗಿ ಶುರುವಾಗಿದೆ.
ಇದರಿಂದ ಪಂಬದ, ಪರವ, ನಲಿಕೆ ಸಮುದಾಯದವರಿಗೆ ಅವಮಾನವಾಗುತ್ತಿದೆ ಎಂದು ದೈವ ಪಾತ್ರಿಗಳು ದಯಾನಂದ ಕತ್ತಲ್ಸಾರ್ ಹೇಳಿದ್ದಾರೆ.
ಇನ್ನು ಮುಂದೆ ದೈವಗಳಿಗೆ ಅವಮಾನಿಸುವವರ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುವುದಾಗಿಯೂ ದಯಾನಂದ ಕತ್ತಲ್ಸಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಜೊತೆಗೆ ಅಪಚಾರದ ಬಗ್ಗೆ ಧ್ವನಿ ಎತ್ತುವಂತೆ ನಟ ರಿಷಭ್ ಶೆಟ್ಟಿಗೆ ಒತ್ತಾಯ ಮಾಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಕ್ರಮಕೈಗೊಳ್ಳದಿದ್ದರೆ ದೈವಾರಾಧಕರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ವರಿಕೆ ನೀಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…