ಇದೇ ರೀತಿ ನಿನ್ನೆ ನಡೆದ ಆರ್ಸಿಬಿ ಪಂದ್ಯದಲ್ಲೂ ಕಾಂತಾರದಲ್ಲಿ ಬರುವ ಪಂಜುರ್ಲಿ ದೈವದ ವೇಷವನ್ನು ಧರಿಸಿ ಕ್ರಿಕೆಟ್ ನೋಡುತ್ತಾ ಎಂಜಾಯ್ ಮಾಡುತ್ತಿರುವ ವ್ಯಕ್ತಿಯೊಬ್ಬರು ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ. ಸದ್ಯ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರ್ ಸಿಬಿ ತನ್ನ ಖಾತೆಯಲ್ಲಿ ಪೋಟೋ ಹಂಚಿಕೊಂಡಿದೆ.
ಕಾಂತಾರದಲ್ಲಿ ಬರುವ ಪಂಜುರ್ಲಿ ದೈವವು ಕರಾವಳಿ ಮತ್ತು ತುಳು ನಾಡಿನ ಜನರ ನಂಬಿಕೆ. ಅನೇಕರು ಈ ದೈವವನ್ನು ಆರಾಧಿಸುತ್ತಾ ಬಂದಿದ್ದಾರೆ. ಇದೇ ವಿಚಾರವನ್ನು ಇಟ್ಟುಕೊಂಡು ಕಾಂತಾರ ಸಿನಿಮಾ ಮಾಡಲಾಗಿದೆ. ಅದು ಹಿಟ್ ಕೂಡ ಆಗಿದೆ. ಅದರಂತೆಯೇ ನಿನ್ನೆ ನಡೆದ ಆರ್ಸಿಬಿ ಫ್ಯಾನ್ ಪಂಜುರ್ಲಿ ದೈವದ ವೇಷ-ಭೂಷಣ ಧರಿಸಿಕೊಂಡು ಪಂದ್ಯ ನೋಡುತ್ತಾ ಎಂಜಾಯ್ ಮಾಡಿದ್ದಾರೆ. ಈ ಫೋಟೋವನ್ನು ಆರ್ಸಿಬಿ ಟ್ವಿಟ್ಟರ್ ಖಾತೆಯೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.ಪಂಜುರ್ಲಿ ದೈವದ ರೀತಿ ವೇಷ ಧರಿಸಿರುವುದಕ್ಕೆ ಕರಾವಳಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಕಾಂತಾರದ ಸಿನೆಮಾದಿಂದಾಗಿ ಇತ್ತೀಚೆಗೆ ಕರಾವಳಿಯ ದೈವಾರಾಧನೆಯನ್ನು ಅಣಕಿಸುವವರು ಸಂಖ್ಯೆ ಹೆಚ್ಚಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…