Featured

ಮಂಗಳೂರು : ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಪ್ರಕರಣ : ಇಬ್ಬರ ಬಂಧನ -Vishwanews24

ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಪ್ರಕರಣ : ತಪ್ಪು ಕಾಣಿಕೆ ಹಾಕಿ ಶರಣಾದ ಆರೋಪಿಗಳು -Vishwanews24

ಮಂಗಳೂರು: ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಮಾಹಿತಿ ನೀಡಿದರು. ಮಂಗಳೂರಿನ ಜೋಕಟ್ಟೆ ನಿವಾಸಿಗಳಾದ ಅಬ್ದುಲ್ ರಹೀಂ, ಅಬ್ದುಲ್ ತೌಫೀಕ್ ಬಂಧಿತ ಆರೋಪಿಗಳು.

ಮೂರು ತಿಂಗಳಲ್ಲಿ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹಗಳ ಚೀಟಿ ಹಾಕಿ‌ ದುಷ್ಕೃತ್ಯ ಎಸಗುತ್ತಿದ್ದ ನಾಲ್ಕೈದು ಪ್ರಕರಣ ಬೆಳಕಿಗೆ ಬಂದಿತ್ತು. ಪಾಂಡೇಶ್ವರ, ಕದ್ರಿ, ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಹಲವು ತನಿಖೆ ನಡೆಸಿದ್ದರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಆದರೆ ಬುಧವಾರ ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ಇಬ್ಬರು ಆರೋಪಿಗಳು ಬಂದಿದ್ದರು. ಈ ಸಂಬಂಧ ಮಾಹಿತಿ ಪಡೆದು ಇಬ್ಬರನ್ನು ಬಂಧಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24

ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ರ ಸ್ನೇಹಿತ ನವಾಝ್ ಎಂಬಾತ ದೈವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದ. ಆತ ಮಂತ್ರವಾದಿ ಎಂಬಂತೆ ತನ್ನನ್ನು ತಾನೂ ಬಿಂಬಿಸಿಕೊಂಡಿದ್ದ. ಅವನೊಂದಿಗೆ ಕೃತ್ಯ ನಡೆಸುತ್ತಿದ್ದೆವು. ಆದರೆ ಕೃತ್ಯವೆಸಗಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ನವಾಝ್, ರಕ್ತವಾಂತಿ ಮಾಡಿ ಸಾವನ್ನಪ್ಪಿದ್ದ.

ಆದರೆ ಸಾವಿಗಿಂತ ಮೊದಲು ಕೊರಗಜ್ಜನ ಶಾಪವಿದೆ ಎನ್ನುವಂತೆ ನವಾಝ್ ಅನಿಸಿಕೆ ಹಂಚಿಕೊಂಡಿದ್ದ. ಸ್ನೇಹಿತ ನವಾಝ್ ಸಾವಿನ ಬಳಿಕ ತೌಫೀಕ್ ಗೂ ಅನಾರೋಗ್ಯ ಸಮಸ್ಯೆ ಕಾಡಿತ್ತು. ಇದರಿಂದ ಭೀತಿಗೊಳಗಾಗಿದ್ದ ಆರೋಪಿಗಳು ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ತಪ್ಪು ಕಾಣಿಕೆ ಹಾಕಲು ಬಂದಿದ್ದರು. ಈ ವೇಳೆ ಸೆರೆ ಹಿಡಿಯಲಾಗಿದೆ. ತನಿಖೆಯಲ್ಲಿ ಮಾಡಿರುವ ಕೃತ್ಯಗಳ ಬಗ್ಗೆ ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago