Featured

ಮಂಗಳೂರು : ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಪ್ರಕರಣ : ಇಬ್ಬರ ಬಂಧನ -Vishwanews24

ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಪ್ರಕರಣ : ತಪ್ಪು ಕಾಣಿಕೆ ಹಾಕಿ ಶರಣಾದ ಆರೋಪಿಗಳು -Vishwanews24

ಮಂಗಳೂರು: ನಗರದ ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಮಾಹಿತಿ ನೀಡಿದರು. ಮಂಗಳೂರಿನ ಜೋಕಟ್ಟೆ ನಿವಾಸಿಗಳಾದ ಅಬ್ದುಲ್ ರಹೀಂ, ಅಬ್ದುಲ್ ತೌಫೀಕ್ ಬಂಧಿತ ಆರೋಪಿಗಳು.

ಮೂರು ತಿಂಗಳಲ್ಲಿ ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹಗಳ ಚೀಟಿ ಹಾಕಿ‌ ದುಷ್ಕೃತ್ಯ ಎಸಗುತ್ತಿದ್ದ ನಾಲ್ಕೈದು ಪ್ರಕರಣ ಬೆಳಕಿಗೆ ಬಂದಿತ್ತು. ಪಾಂಡೇಶ್ವರ, ಕದ್ರಿ, ಉಳ್ಳಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಹಲವು ತನಿಖೆ ನಡೆಸಿದ್ದರೂ ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಆದರೆ ಬುಧವಾರ ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ಇಬ್ಬರು ಆರೋಪಿಗಳು ಬಂದಿದ್ದರು. ಈ ಸಂಬಂಧ ಮಾಹಿತಿ ಪಡೆದು ಇಬ್ಬರನ್ನು ಬಂಧಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24

ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ರ ಸ್ನೇಹಿತ ನವಾಝ್ ಎಂಬಾತ ದೈವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದ. ಆತ ಮಂತ್ರವಾದಿ ಎಂಬಂತೆ ತನ್ನನ್ನು ತಾನೂ ಬಿಂಬಿಸಿಕೊಂಡಿದ್ದ. ಅವನೊಂದಿಗೆ ಕೃತ್ಯ ನಡೆಸುತ್ತಿದ್ದೆವು. ಆದರೆ ಕೃತ್ಯವೆಸಗಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ನವಾಝ್, ರಕ್ತವಾಂತಿ ಮಾಡಿ ಸಾವನ್ನಪ್ಪಿದ್ದ.

ಆದರೆ ಸಾವಿಗಿಂತ ಮೊದಲು ಕೊರಗಜ್ಜನ ಶಾಪವಿದೆ ಎನ್ನುವಂತೆ ನವಾಝ್ ಅನಿಸಿಕೆ ಹಂಚಿಕೊಂಡಿದ್ದ. ಸ್ನೇಹಿತ ನವಾಝ್ ಸಾವಿನ ಬಳಿಕ ತೌಫೀಕ್ ಗೂ ಅನಾರೋಗ್ಯ ಸಮಸ್ಯೆ ಕಾಡಿತ್ತು. ಇದರಿಂದ ಭೀತಿಗೊಳಗಾಗಿದ್ದ ಆರೋಪಿಗಳು ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ತಪ್ಪು ಕಾಣಿಕೆ ಹಾಕಲು ಬಂದಿದ್ದರು. ಈ ವೇಳೆ ಸೆರೆ ಹಿಡಿಯಲಾಗಿದೆ. ತನಿಖೆಯಲ್ಲಿ ಮಾಡಿರುವ ಕೃತ್ಯಗಳ ಬಗ್ಗೆ ಆರೋಪಿಗಳು ಹೇಳಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು

Vishwa News 24

Recent Posts

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 hours ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 hours ago

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…

4 hours ago

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

5 hours ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

6 hours ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

6 hours ago