ಮಂಗಳೂರು: ದೈವಸ್ಥಾನಗಳ ಹುಂಡಿಗೆ ಕಾಂಡೋಮ್ ಮತ್ತು ಧರ್ಮ ನಿಂದನೆಯ ಬರಹಗಳನ್ನು ಹಾಕಿ ಅಪವಿತ್ರ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಪೂರಕ ಸಾಕ್ಷಿಗಳಿಲ್ಲದ ಕಾರಣ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ ಪೊರ್ಕೋಡಿಯ ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ಎಂಬುವರನ್ನು ಠಾಣೆಗೆ ಕರೆಯಿಸಿ 4 ದಿನಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅವರ ವಿರುದ್ಧ ಐಪಿಸಿ ಸೆಕ್ಷನ್ 169ರನ್ವಯ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗಿದೆ. ಇನ್ನೂ ಪೂರಕ ಸಾಕ್ಷ್ಯ ಗಳು ದೊರೆತಿಲ್ಲ.ಸಾಕ್ಷ್ಯ ಗಳು ದೊರೆತ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಆರೋಪಿಗಳು ಈಗಲೂ ಸಂಶಯಾಸ್ಪದ ಆರೋಪಿಗಳೇ ಆಗಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24
ತಮ್ಮ ಸ್ನೇಹಿತನಾಗಿದ್ದ ನವಾಜ್ ಕೆಲವು ದೈವಸ್ಥಾನಗಳನ್ನು ಅಪವಿತ್ರಗೊಳಿಸಿದ ಕೃತ್ಯ ಎಸಗಿದ್ದು ಆತ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ. ನಾವು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ. ಆದರೆ ವಿಷಯ ಗೊತ್ತಿದ್ದ ಕಾರಣ ನಮಗೂ ಭಯವಾಗುತ್ತಿದ್ದು ಅದಕ್ಕಾಗಿ ಎಮ್ಮೆಕೆರೆ ಬಬ್ಬುಸ್ವಾಮಿ-ಕೊರಗಜ್ಜನ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಲು ಬಂದಿದ್ದೇವೆ ಎಂದು ಇಬ್ಬರು ಸಂಶಯಾಸ್ಪದ ಆರೋಪಿಗಳು ಹೇಳಿದ್ದರು. ಆದರೆ ಅವರು ಕೂಡ ನೇರವಾಗಿ ಕೃತ್ಯದಲ್ಲಿ ಪಾಲ್ಗೊಂಡಿದ್ದರು ಎಂಬುದಕ್ಕೆ ಪೂರಕ ಸಾಕ್ಷೃಗಳ ಅಗತ್ಯವಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಉಡುಪಿ : ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿ : ಅರ್ಜಿ ಆಹ್ವಾನ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…