ಮಂಗಳೂರು: ದೈವಸ್ಥಾನಗಳ ಹುಂಡಿಗೆ ಕಾಂಡೋಮ್ ಮತ್ತು ಧರ್ಮ ನಿಂದನೆಯ ಬರಹಗಳನ್ನು ಹಾಕಿ ಅಪವಿತ್ರ ಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಪೂರಕ ಸಾಕ್ಷಿಗಳಿಲ್ಲದ ಕಾರಣ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ ಪೊರ್ಕೋಡಿಯ ಅಬ್ದುಲ್ ರಹೀಂ ಮತ್ತು ಅಬ್ದುಲ್ ತೌಫೀಕ್ ಎಂಬುವರನ್ನು ಠಾಣೆಗೆ ಕರೆಯಿಸಿ 4 ದಿನಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅವರ ವಿರುದ್ಧ ಐಪಿಸಿ ಸೆಕ್ಷನ್ 169ರನ್ವಯ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗಿದೆ. ಇನ್ನೂ ಪೂರಕ ಸಾಕ್ಷ್ಯ ಗಳು ದೊರೆತಿಲ್ಲ.ಸಾಕ್ಷ್ಯ ಗಳು ದೊರೆತ ಕೂಡಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಆರೋಪಿಗಳು ಈಗಲೂ ಸಂಶಯಾಸ್ಪದ ಆರೋಪಿಗಳೇ ಆಗಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24
ತಮ್ಮ ಸ್ನೇಹಿತನಾಗಿದ್ದ ನವಾಜ್ ಕೆಲವು ದೈವಸ್ಥಾನಗಳನ್ನು ಅಪವಿತ್ರಗೊಳಿಸಿದ ಕೃತ್ಯ ಎಸಗಿದ್ದು ಆತ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ. ನಾವು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ. ಆದರೆ ವಿಷಯ ಗೊತ್ತಿದ್ದ ಕಾರಣ ನಮಗೂ ಭಯವಾಗುತ್ತಿದ್ದು ಅದಕ್ಕಾಗಿ ಎಮ್ಮೆಕೆರೆ ಬಬ್ಬುಸ್ವಾಮಿ-ಕೊರಗಜ್ಜನ ಕ್ಷೇತ್ರದಲ್ಲಿ ತಪ್ಪು ಕಾಣಿಕೆ ಹಾಕಲು ಬಂದಿದ್ದೇವೆ ಎಂದು ಇಬ್ಬರು ಸಂಶಯಾಸ್ಪದ ಆರೋಪಿಗಳು ಹೇಳಿದ್ದರು. ಆದರೆ ಅವರು ಕೂಡ ನೇರವಾಗಿ ಕೃತ್ಯದಲ್ಲಿ ಪಾಲ್ಗೊಂಡಿದ್ದರು ಎಂಬುದಕ್ಕೆ ಪೂರಕ ಸಾಕ್ಷೃಗಳ ಅಗತ್ಯವಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಉಡುಪಿ : ಜಿಲ್ಲಾ ಧರ್ಮೋತ್ಥಾನ ಪ್ರಶಸ್ತಿ : ಅರ್ಜಿ ಆಹ್ವಾನ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…