Featured

ಮಂಗಳೂರು : ದೈವಾರಾಧನೆಯು ಯಾವುದೇ ನಾಟಕ, ಸಿನಿಮಾ, ಧಾರವಾಹಿ, ಯಕ್ಷಗಾನದಲ್ಲೂ ಪ್ರದರ್ಶನ ಆಗಬಾರದು : ಶರಣ ಪಂಪ್ವೆಲ್ ಎಚ್ಚರಿಕೆ

ಮಂಗಳೂರು: ಸಿನಿಮಾ  ಮತ್ತು ನಾಟಕಗಳಲ್ಲಿ ದೈವಾರಾಧನೆಗೆ ಅಪಮಾನ ..

ಇದಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ದೈವಾರಾಧಕರ ಮನವಿ

ಕಾಂತಾರ-2ನಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ ..

ದೈವಾರಾಧಕರ ಹೋರಾಟಕ್ಕೆ ಸಾಥ್ ನೀಡಿದ ವಿಶ್ವ ಹಿಂದೂ ಪರಿಷತ , ಬಜರಂಗದಳ  ..

ರಿಷಬ್ ಶೆಟ್ಟಿಗೂ ಎಚ್ಚರಿಕೆ ನೀಡಿದ ಬಜರಂಗದಳದ ಮುಖಂಡ ಶರಣ ಪಂಪ್ವೆಲ್

ಮಂಗಳೂರು: ಸಿನಿಮಾ  ಮತ್ತು ನಾಟಕಗಳಲ್ಲಿ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಇಲ್ಲಿನ ದೈವಾರಾಧಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ  ಮನವಿ ಸಲ್ಲಿಸಿದ್ದಾರೆ.

`ಕಾಂತಾರ’ ಸಿನಿಮಾದಲ್ಲಿ ದೈವದ ಅಣುಕು ವೇಷ ಹಾಕಿರುವ ರಿಷಬ್ ಶೆಟ್ಟಿ, `ಶಿವದೂತೆ ಗುಳಿಗೆ’ ನಾಟಕದಲ್ಲಿ ದೈವದ ಅಣುಕು ವೇಷ ಧರಿಸಿದ ಸ್ವರಾಜ್ ಹಾಗೂ `ಕಾವೇರಿ’ ಧಾರಾವಾಹಿಯ ಸಿ.ಕೆ ಪ್ರಶಾಂತ್ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಆಖಲಿಸಿ ತನಿಖೆ ನಡೆಸುವಂತೆ ತುಳುನಾಡ ದೈವಾರಾಧನಾ ಸಂರಕ್ಷಣಾ ವೇದಿಕೆ ಮನವಿ ಮಾಡಿದೆ.

ದೈವಾರಾಧಕರ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ , ಬಜರಂಗದಳ ಸಾಥ್ ನೀಡಿದೆ. ಮುಂದೆ ಟಿವಿ, ಸಿನೆಮಾ ನಾಟಕಗಳಲ್ಲಿ ದೈವಾರಾಧನೆಯ ಪ್ರದರ್ಶನವಾಗಬಾರದು. ಮುಂದೆ ಕಂಡ ಕಂಡಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಮುತ್ತಿಗೆ ಹಾಕುತ್ತೇವೆ. ಈ ಬಗ್ಗೆ ರಿಷಬ್ ಶೆಟ್ಟಿಗೂ ಎಚ್ಚರಿಕೆ ನೀಡುತ್ತೇವೆ ಎಂದು ಬಜರಂಗದಳದ ಮುಖಂಡ ಶರಣ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ.

ಮುಂದೆ ಸಿನಿಮಾಗಳಲ್ಲಿ ದೈವಾರಾಧನೆ ಪ್ರದರ್ಶನ ಆದ್ರೆ ನಮ್ಮ ಹೋರಾಟದ ಸ್ವರೂಪ ತೀವ್ರಗೊಳ್ಳುತ್ತದೆ. ದೈವಾರಾಧನೆಯು ಯಾವುದೇ ನಾಟಕ, ಸಿನಿಮಾ, ಧಾರವಾಹಿ, ಯಕ್ಷಗಾನದಲ್ಲೂ ಪ್ರದರ್ಶನ ಆಗಬಾರದು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಬೆಳ್ತಂಗಡಿ ನಳಿಕೆ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಾಭಾಕರ್ ಮಾತನಾಡಿ, ತುಳುನಾಡಿನಲ್ಲಿ ಹುಟ್ಟಿ ತುಳುನಾಡು ದೈವಕ್ಕೆ ಅಪಮಾನ ಮಾಡುತ್ತಿದ್ದಾರೆ ಅಂದ್ರೆ ನಾವು ಸುಮ್ಮನೆ ಕೂರಲು ಸಾಧ್ಯವಿಲ್ಲ. ಮೂಲ ಪರಂಪರೆಯಿಂದ ನಾವು ಮಾಡಿಕೊಂಡು ಬಂದ ಚಾಕರಿ ಅದರೂ ದೈವದ ಚಾಕರಿಯನ್ನು ಮಾಡಿದವರೇ ಮಾಡಬೇಕು. ಆದ್ರೆ ದೈವದ ಬಣ್ಣ, ಹಚ್ಚಿ, ಗಗ್ಗರ ಕಟ್ಟಿಕೊಂಡು ಇಷ್ಟಬಂದಂತೆ ಮಾಡುತ್ತಿದ್ದಾರೆ. ಕಾಂತಾರ ಸಿನಿಮಾದಲ್ಲಿ ಮಾಡಿದ್ದಾರೆ. ಅವರಿಗೆ ಏನು ನೈತಿಕತೆ ಇದೆ? ನಮ್ಮ ದೈವವನ್ನು ಬೀದಿಬದಿಗೆಲ್ಲ ಕೊಂಡೊಯ್ದು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗುಳಿಗ ದೈವ ನಂಬಿಕೆ ಇರುವ ಸ್ಥಳ. ಇನ್ನೂ ಕಾಂತಾರ-2 ಬರುತ್ತಿದೆ. ಯಾವ ಕಾಂತಾರ ಸಿನಿಮಾ ಬಂದರೂ ನಾವು ಹೋರಾಟಕ್ಕೆ ಇಳಿಯೋದೆ. ಇವರು ದುಡ್ಡು ಮಾಡುವುದಿದ್ದರೆ, ದೇಶದಲ್ಲಿ ಎಷ್ಟೊಂದು ಸಮಸ್ಯೆಗಳಿವೆ, ಅವುಗಳನ್ನಿಟ್ಟುಕೊಂಡು ಮಾಡಲಿ. ವಿಷ್ಣುವರ್ಧನ್ ಅವರು ಸಿನಿಮಾ ಮಾಡಿದ್ದರು. ಆದ್ರೆ ಯಾವೊಂದು ಸಮಾಜಕ್ಕೆ ಅನ್ಯಾಯ ಆಗುವ ರೀತಿಯಲ್ಲಿ ಮಾಡಲಿಲ್ಲ. ಇದು ಮುಂದುವರಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

5 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

5 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

6 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

6 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

6 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

7 hours ago