ಮಂಗಳೂರು: ಖಾಸಗಿ ಬಸ್ ಒಂದು ಅತಿ ವೇಗದ ಚಾಲನೆಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ತಾಯಿ ಮಗಳು ಗಾಯಗೊಂಡ ಘಟನೆ ಮೂಡುಬಿದಿರೆ ಬಳಿ ತೋಡಾರಿನಲ್ಲಿ ನಡೆದಿದೆ.
ಈ ಅಪಘಾತ ತೋಡಾರ್ ನ ಮೈಟ್ ಕಾಲೇಜು ಮುಂಬಾಗದಲ್ಲೇ ನಡೆದಿದ್ದು, ವಿದ್ಯಾರ್ಥಿಗಳು ತೀವ್ರ ಆಕ್ರೋಶ ಗೊಂಡಿದ್ದಾರೆ. ಮಾಸ್ಟರ್ ಎಂಬ ಖಾಸಗಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಕಾಲೇಜು ಬಸ್ಗೆ ಡಿಕ್ಕಿ ಹೊಡೆದು ಬಳಿಕ ತಾಯಿ ಮಗಳು ಇದ್ದ ದ್ವಿಚಕ್ರ ವಾಹನಕ್ಕೆ ಡಿ*ಕ್ಕಿ ಹೊಡೆದಿದೆ.
ಮಾಸ್ಟರ್ ಬಸ್ನ ಅವಾಂತರಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ಗೆ ಹಾನಿ ಮಾಡಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳಲ್ಲಿ ಖಾಸಗಿ ಬಸ್ಗಳ ಅತಿವೇಗದ ಹಾಗೂ ನಿರ್ಲಕ್ಷ್ಯದ ಚಾಲನೆಗೆ ಸೂಕ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಒಂದು ಕಡೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಅ*ಪಘಾತಗಳಿಗೆ ಅಹ್ವಾನ ನೀಡುತ್ತಿದೆ. ಅದರ ನಡುವೆ ಬಸ್ಗಳ ಅತಿ ವೇಗದಿಂದ ದ್ವಿಚಕ್ರ ವಾಹನ ಸವಾರರು ಜೀವ ಕೈಲಿ ಹಿಡಿದು ಓಡಾಡುವ ಪರಿಸ್ತಿತಿ ಇದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…