ಮಂಗಳೂರು : ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದ್ವಿಚಕ್ರ ವಾಹನವು ಬಲ್ಲಾಳ್ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್ನ ಮುಂಭಾಗದ ಚಕ್ರಕ್ಕೆ ಸಿಲುಕಿ ಮುಂದೆ ತಳ್ಳಲ್ಪಟ್ಟಿದ್ದು, ಬಸ್ನ ಟಯರ್ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಕೂಡಲೇ ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ.
ನಂತೂರು ಬಳಿಯ ಬಸ್ ನಿಲ್ದಾಣ ಎದುರಲ್ಲೇ ಘಟನೆ ನಡೆದಿದ್ದು ಕುಡುಪು ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್ ಡಿಕ್ಕಿಯಾಗಿದೆ. ಬಸ್ ವೇಗವಾಗಿತ್ತೇ, ಸ್ಕೂಟರ್ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಗೊತ್ತಾಗಿಲ್ಲ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಮತ್ತು ಯುವಕ ವಾಮಂಜೂರಿನಲ್ಲಿ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದರೆಂದು ತಿಳಿದುಬಂದಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…