ಮಂಗಳೂರು : ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್ಬಾಗ್ ನಿವಾಸಿ ದೀಪ್ತಿ (26) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದ್ವಿಚಕ್ರ ವಾಹನವು ಬಲ್ಲಾಳ್ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್ನ ಮುಂಭಾಗದ ಚಕ್ರಕ್ಕೆ ಸಿಲುಕಿ ಮುಂದೆ ತಳ್ಳಲ್ಪಟ್ಟಿದ್ದು, ಬಸ್ನ ಟಯರ್ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಕೂಡಲೇ ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ.
ನಂತೂರು ಬಳಿಯ ಬಸ್ ನಿಲ್ದಾಣ ಎದುರಲ್ಲೇ ಘಟನೆ ನಡೆದಿದ್ದು ಕುಡುಪು ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್ ಡಿಕ್ಕಿಯಾಗಿದೆ. ಬಸ್ ವೇಗವಾಗಿತ್ತೇ, ಸ್ಕೂಟರ್ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಗೊತ್ತಾಗಿಲ್ಲ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಮತ್ತು ಯುವಕ ವಾಮಂಜೂರಿನಲ್ಲಿ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದರೆಂದು ತಿಳಿದುಬಂದಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…