Featured

ಮಂಗಳೂರು : ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಸಂಚರಿಸಿಲು ಅವಕಾಶವಿಲ್ಲ : ಅಲೋಕ್ ಕುಮಾರ್ ಆದೇಶ – Vishwanews24

ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ..

ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ, ಮೂವರು ಯುವಕರ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ಸಂಚರಿಸಿಲು ನಿರ್ಬಂಧ ವಿಧಿಸಿ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ.

ಮಂಗಳೂರಿನ ಕಮಿಷನರ್‌ ಕಚೇರಿಯಲ್ಲಿ ದ.ಕ, ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ನಗರ ಕಮಿಷನರ್‌ ವ್ಯಾಪ್ತಿಯ ಪೊಲೀಸ್‌ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಹಾಕಿರುವ ನಿರ್ಬಂಧಗಳನ್ನು ಹಂತಹಂತವಾಗಿ ತೆರವು ಮಾಡಲಾಗುವುದು . ಇದರೊಂದಿಗೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರು ಸಂಚರಿಸುವಂತಿಲ್ಲ ಎಂದು ಹೇಳಿದ್ದಾರೆ .

ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ಉಳಿದವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ. ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನಲೆ ಈ ಕ್ರಮ ಜಾರಿಗೊಳಿಸಿದ್ದು ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು ಎಂದು ಹೇಳಿದ್ದಾರೆ.

ಇದಲ್ಲದೆ 2015ರ ಬಳಿಕದ ಕೋಮುಗಲಭೆ ಪ್ರಕರಣಗಳನ್ನು ಪರಿಶೀಲಿಸಿ, ಅದರ ಆರೋಪಿಗಳ ಬಗ್ಗೆ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಇದರೊಂದಿಗೆ ಜಿಲ್ಲಾ ಪೊಲೀಸ್‌ ವತಿಯಿಂದ ಗಡಿಪ್ರದೇಶಗಳಲ್ಲಿ 12 ಕಡೆ ಹಾಗೂ ನಗರ ಪೊಲೀಸ್‌ ವ್ಯಾಪ್ತಿ ಯಲ್ಲಿ 6 ಕಡೆಗಳಲ್ಲಿ ಚೆಕ್‌ಪೋಸ್ಟ್‌ ಹಾಕಲಾಗಿದೆ. ಸಿಎಂ ಸೂಚನೆ ಮೇರೆಗೆ ಹಾಗೂ ಅಹಿತಕರ ಘಟನೆಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮುಂದಿನ ಒಂದು ವರ್ಷ ಕಾಲ ಚೆಕ್‌ಪೋಸ್ಟ್‌ಗಳು ಕಾರ್ಯವಹಿಸಲಿವೆ ಎಂದು ಮಾಹಿತಿ ನೀಡಿದರು

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago