ಮಂಗಳೂರು: ನಗರದ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಜ್ಯ ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಎಂದು ಗುರುತಿಸಲಾಗಿದೆ.
ನವೆಂಬರ್ 14ರಂದು ಆರೋಪಿಗಳು ಸ್ನೇಹಿತರನ್ನು ಭೇಟಿ ಮಾಡಲು ಮಂಗಳೂರಿಗೆ ಬಂದಿದ್ದ ಆರೋಪಿಗಳು ಮಂಗಳೂರು ರೈಲ್ವೇ ಜಂಕ್ಷನ್ ಪ್ರದೇಶದ ಸುತ್ತಮುತ್ತ ಓಡಾಡುತ್ತಿದ್ದರು. ನಂತರ ಅವರು ನಾಗುರಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಒಂದು ಸ್ಕೂಟರ್ ಮತ್ತು ಜಪ್ಪಿನಮೊಗರುವಿನಲ್ಲಿರುವ ಆದಿಮಾಯ ದೇವಸ್ಥಾನದ ಬಳಿ ನಿಲ್ಲಿಸಿದ್ದ ಮತ್ತೊಂದು ಸ್ಕೂಟರ್ ಅನ್ನು ಕಳವು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ವೇಳೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳು ನವೆಂಬರ್ ೩೦ರಂದು ಮತ್ತೆ ಮಂಗಳೂರಿಗೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಎರಡು ಸ್ಕೂಟರ್ಗಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ಸುಮಾರು 1,23,000 ರೂ. ಎಂದು ಅಂದಾಜಿಸಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…