ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನಗಳಲ್ಲಿ ಇಬ್ಬರು ಯುವಕರು/ಪುರುಷರು ಸಂಚರಿಸಲು ಹೇರಿದ್ದ ನಿರ್ಬಂಧವನ್ನು ದ.ಕ. ಜಿಲ್ಲಾ ಪೊಲೀಸರು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ. ಆದೇಶ ಹಿಂಪಡೆದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಹೊರತುಪಡಿಸಿ 18 ವರ್ಷ ಮೇಲ್ಪಟ್ಟ ಯುವಕರು ಯಾರೂ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುವಂತಿಲ್ಲ. ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರುತ್ತದೆ. ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನಲೆ ಈ ಕ್ರಮ ಜಾರಿಗೊಳಿಸಿದ್ದು ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಮಧ್ಯಾಹ್ನ ಆದೇಶಿಸಿದ್ದರು. ಆದರೆ ಸಂಜೆ ವೇಳೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ನಿಯಮಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶ ಹಿಂಪಡೆಯಲಾಗಿದೆ ಎನ್ನಲಾಗಿದೆ. ಉಳಿದ ನಿಬಂಧನೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…