ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ಸಲುವಾಗಿ ದ್ವಿಚಕ್ರ ವಾಹನಗಳಲ್ಲಿ ಇಬ್ಬರು ಯುವಕರು/ಪುರುಷರು ಸಂಚರಿಸಲು ಹೇರಿದ್ದ ನಿರ್ಬಂಧವನ್ನು ದ.ಕ. ಜಿಲ್ಲಾ ಪೊಲೀಸರು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ. ಆದೇಶ ಹಿಂಪಡೆದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಹೊರತುಪಡಿಸಿ 18 ವರ್ಷ ಮೇಲ್ಪಟ್ಟ ಯುವಕರು ಯಾರೂ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಾಗಿ ಸಂಚರಿಸುವಂತಿಲ್ಲ. ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರುತ್ತದೆ. ಸಹಸವಾರರು ಅನೇಕ ಬಾರಿ ಅಪರಾಧಗಳಲ್ಲಿ ಭಾಗಿಯಾಗುವುದು ಜಾಸ್ತಿ ಕಂಡುಬಂದ ಹಿನ್ನಲೆ ಈ ಕ್ರಮ ಜಾರಿಗೊಳಿಸಿದ್ದು ಮುಖ್ಯವಾಗಿ ಯುವಕರ ಮೇಲೆ ನಿಗಾ ಇರಿಸಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಮಧ್ಯಾಹ್ನ ಆದೇಶಿಸಿದ್ದರು. ಆದರೆ ಸಂಜೆ ವೇಳೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಹೊಸ ನಿಯಮಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶ ಹಿಂಪಡೆಯಲಾಗಿದೆ ಎನ್ನಲಾಗಿದೆ. ಉಳಿದ ನಿಬಂಧನೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆಯುಕ್ತರು ತಿಳಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…