ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ್ವೇಷದ ರಾಜಕಾರಣ ಮಾಡುವ ಪರಿಪಾಠವನ್ನು ಪ್ರಾರಂಭ ಮಾಡಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲದ, ಜನ ಸಮಾನ್ಯರ ಕಷ್ಟ ಸುಖದಲ್ಲಿ ಭಾಗಿಯಾಗಲು ಸಾಧ್ಯವಿಲ್ಲದ ಸರಕಾರ ದ್ವೇಷದ ರಾಜಕಾರಣ ಮಾಡಿ ದಿನ ಕಳೆಯುವ ಕೆಲಸದಲ್ಲಿ ಸರಕಾರ ತೊಡಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆರೋಪ ಮಾಡಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು ಅದರಲ್ಲೂ ಬಿಜೆಪಿಯ ಶಾಸಕರ ಮೇಲೆ ವಿನಾಕಾರಣ ಮೊಕದ್ದಮೆಗಳನ್ನು ದಾಖಲಿಸುವ ಪ್ರವೃತ್ತಿಯನ್ನು ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಹಾಕಿಕೊಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಆಡಳಿತದಲ್ಲಿ ಇರುತ್ತದೆ ಎನ್ನುವ ಭಾವನೆ ಇದ್ದರೆ ಅದನ್ನು ತೆಗೆದು ಹಾಕಿ. ಈ ರೀತಿಯ ದ್ವೇಷದ ರಾಜಕಾರಣ ಮಾಡಲು ಮುಂದೆ ಬಿಜೆಪಿ ಸರಕಾರ ಬಂದಾಗ ನಮಗೂ ಸಾಧ್ಯವಿದೆ. ಜನಪ್ರತಿಧಿಯಾಗಿ ಸಮಾಜದ ಒಳಿತನ್ನು ಕಾಪಾಡುವ ಶಾಸಕರ ಮೇಲೆಯೇ ವಿನಾಕಾರಣ ಮೊಕದ್ದಮೆ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…