Featured

ಮಂಗಳೂರು: ದ.ಕ., ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಹರೀಶ್ ಪೂಂಜಾ ಆಗ್ರಹ – vishwanews24

ಮಂಗಳೂರು: ದ.ಕ., ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಹರೀಶ್ ಪೂಂಜಾ ಆಗ್ರಹ

ಮಂಗಳೂರು : ಈ ಬಾರಿ ಸುರಿದ ಭಾರಿ ಮಳೆಗೆ ಘಟ್ಟಪ್ರದೇಶ ವಿಶೇಷವಾಗಿ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಈ ಬಗ್ಗೆ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಿತ್ತು ಎಂದು ತಿಳಿಸಿದರು. ಇನ್ನು ಶಾಸಕ ಹರೀಶ್ ಪೂಂಜಾ ಅವರ ಮಾತಿಗೆ ಸುನಿಲ್‌ ಕುಮಾರ್‌, ವಿಪಕ್ಷ ನಾಯಕ ಆರ್ ಅಶೋಕ್ ದನಿಗೂಡಿಸಿದರು.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಯನ್ನು ಹಂಚಿಕೊಂಡಿರುವ ಬಿಜೆಪಿ, ‘ನಮ್ಮ ಸರ್ಕಾರವಿದ್ದಾಗ ಪ್ರವಾಹ ಸಂಭವಿಸಿದರೆ ಆಯಾ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡುತ್ತು. ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ವಿಪಕ್ಷದ ಶಾಸಕರಿಗೂ ಅನುದಾನ ನೀಡಿದ್ದರು. ಆದರೆ ಈ ಸರ್ಕಾರದಲ್ಲಿ ವಿಪಕ್ಷವಿರಲಿ, ಆಡಳಿತ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತಿಲ್ಲ’ ಎಂದು ಪೋಸ್ಟ್ ಮಾಡಿದೆ.

Vishwa News 24

Recent Posts

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

59 seconds ago

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – vishwanews24

ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ…

17 minutes ago

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

40 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

22 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

22 hours ago