Featured

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ – Vishwanews24

ಮಂಗಳೂರು: ದ.ಕ ಜಿಲ್ಲೆಯ ನಾಲ್ಕು ಮಂದಿಗೆ ಒಲಿದು ಬಂದ ರಾಷ್ಟ್ರಪತಿ ಭೇಟಿ ಅವಕಾಶ

ಮಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಜನಾಂಗದ ಸದಸ್ಯರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿದ್ದು, ಈ ಸಲುವಾಗಿ ದಿಲ್ಲಿಯ ರಾಷ್ಟ್ರಪತಿ ಭವನದ ಅಮೃತ ಉದ್ಯಾನಕ್ಕೆ ದೇಶದ ಎಲ್ಲೆಡೆಯಿಂದ ಬುಡಕಟ್ಟು ಜನಾಂಗದ ವಿವಿಧ ವರ್ಗಗಳ ಪುರುಷರು ಹಾಗೂ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಿಂದಲೂ ಹಲವು ಸಾಧಕರನ್ನು ಆಯ್ಕೆ ಮಾಡಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ.

ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.

ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬುಡಕಟ್ಟು ಪ್ರತಿನಿಧಿಗಳಿಗೆ ಈ ಅವಕಾಶವಿದ್ದು, ದ.ಕ. ಕೊರಗರ ಜಿಲ್ಲಾ ಸಂಘದಿಂದ ಈ ಹೆಸರು ಸೂಚಿಸಲಾಗಿದೆ.

ಜೂನ್‌ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

29 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

35 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago