Featured

ಮಂಗಳೂರು ಧಾರಾಕಾರ ಮಳೆ ; ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ಥ – Vishwanews24

ಮಂಗಳೂರು ಧಾರಾಕಾರ ಮಳೆ ; ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ಥ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ಜಿಲ್ಲೆಯ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನಕ್ಕೆ ಸಮಸ್ಯೆ ತಂದೊಡ್ಡಿದೆ. ಕೃಷಿ ತೋಟಗಳಿಗೆ ನೀರು ನುಗ್ಗಿದ ಪರಿಣಾಮ ಕೃಷಿಗೆ ಹಾನಿಯಾಗಿದೆ.

ಮಂಗಳೂರು ನಗರದಲ್ಲಿ ಬೆಳಗ್ಗೆ ಸ್ವಲ್ಪ ಬಿಡುವು ಪಡೆದಿದ್ದ ಮಳೆ ಬಳಿಕ ಬಿರುಸು ಪಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನ ಹೈರಾಣಾಗಿದ್ದು, ಮಳೆಯಲ್ಲಿ ನೆನೆದುಕೊಂಡೇ ಕಚೇರಿ, ದೈನಂದಿನ ಕೆಲಸಗಳಿಗೆ ತೆರಳುವಂತಾಗಿದೆ. ಕೆಲವೆಡೆ ರಸ್ತೆಯಲ್ಲಿ ನೀರು ನಿಂತು ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆ ತಂದೊಡ್ಡಿದೆ. ಕೆಲವು ಮನೆ ಅಂಗಳಕ್ಕೂ ನೀರು ನುಗ್ಗಿದೆ. ಬಿರುಸಿನ ಮಳೆಗೆ ಸಂಚಾರವೂ ಅಸ್ತವ್ಯಸ್ಥಗೊಂಡಿದ್ದು, ನಗರದ ಪಿವಿಎಸ್, ಹಂಪನಕಟ್ಟೆ, ಲಾಲ್‌ಬಾಗ್‌ ಮುಂತಾದೆಡೆ ಸಂಚಾರದಟ್ಟಣೆ ಉಂಟಾಗಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಇಂದು ರೆಡ್ ಎಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶ, ಸಮುದ್ರ, ನದಿ ಬದಿಗಳಲ್ಲಿ ವಾಸಿಸುವವರು ಎಚ್ಚರಿಕೆ ವಹಿಸಲು ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago