Featured

ಮಂಗಳೂರು : ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ ; ಮತ್ತೋರ್ವನ ಬಂಧನ – vishwanews24

ಮಂಗಳೂರು : ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ ; ಮತ್ತೋರ್ವಬಂಧನ

ಮಂಗಳೂರು: ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಲಿ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸಿ ಬಂಧನಕ್ಕೊಳಗಾದವರ ಸಂಖ್ಯೆ 6ಕ್ಕೆ ಏರಿದಂತಾಗಿದೆ. ಆರೋಪಿಯನ್ನು ಗುರುಪುರದಲ್ಲಿ ಬಂಧಿಸಿದ್ದ ಪೊಲೀಸರು, ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಗರದ ದಡ್ಡಲ್ ಕಾಡ್ ಎಂಬಲ್ಲಿ ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಸರಕಾರದ ಬೇರೆ ಬೇರೆ ಇಲಾಖೆಯ ಕಚೇರಿ ಮತ್ತು ನ್ಯಾಯಾಲಯಕ್ಕೆ ವಂಚಿಸುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ನಗರದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ‌ ಪೊಲೀಸರು ಮುಲ್ಕಿ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಸೆ.9 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ನೀಡಿ ಮಾಹಿತಿಯಂತೆ ತೊಕ್ಕೊಟ್ಟು ಅಂಬಿಕಾ ರಸ್ತೆ ನಿವಾಸಿ ನಿಶಾಂತ್ ನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

ಇದೇ ಪ್ರಕರಣಕ್ಕೆ‌ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿ ಬಂಟ್ವಾಳ ತಾಲೂಕಿನ ಪುದು ಸಜೀರ್ ರಸ್ತೆ ನಿವಾಸಿ ನಿತಿನ್ ಕುಮಾರ್, ಇಂದಿರಾನಗರ ಹಾಲಾಡಿ ಸಜಿಪ‌ಮುನ್ನೂರು ನಿವಾಸಿ ಹಸನ್ ರಿಯಾಝ್, ಕಾವೂರು ಫಳ್ನೀರ್ ನಿವಾಸಿ ಹನೀಫ್ ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲೂ ಒಂದು ಪ್ರಕರಣ ದಾಖಲಾಗಿತ್ತು‌. ಈ ಸಂಬಂಧ ಸುರತ್ಕಲ್ ಪೊಲೀಸರು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿಯನ್ನು ಬುಧವಾರ ಬಂಧಿಸಿ ನ್ಯಾಯಾಲಯಲಕ್ಕೆ ಹಾಜರು ಪಡಿಸಿದ್ದಾರೆ. ಸದ್ಯ ಈತನ ಬಂಧನದೊಂದಿಗೆ ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣದಲ್ಲಿ ಒಟ್ಟು 6ಮಂದಿ ಬಂಧನಕ್ಕೊಳಗಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

3 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

6 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago