ಮಂಗಳೂರು : ನಕ್ಸಲ್ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರು ನಿರ್ದೋಷಿಗಳು ಎಂದು ಗುರುವಾರ ಮೂರನೇ ಹೆಚ್ಚುವರಿ ನ್ಯಾಯಾಲಯ ತೀರ್ಪು ನೀಡಿದೆ.
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದ ವಿಠಲ್ ಮಲೆಕುಡಿಯ ಅವರ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು, ಹಲವು ಸಂಘಟನೆಗಳು, ರಾಜಕಾರಣಿಗಳು ಬೆಂಬಲ ಸೂಚಿಸಿದ್ದರು. ಅವರನ್ನು ಬಿಡುಗಡೆ ಮಾಡಬೇಕು ಎಂದು ಹೋರಾಟ ನಡೆಸಿದ್ದರು.
ಬೆಳ್ತಂಗಡಿಯ ಕುತ್ಲೂರು ನಿವಾಸಿಯಾಗಿದ್ದ ವಿಠಲ್ ಮಲೆಕುಡಿಯ ಅವರನ್ನು 2012 ಮಾರ್ಚ್ 3 ರಂದು ನಕ್ಸಲ್ ನಿಗ್ರಹ ಪಡೆ ಬಂಧಿಸಿತ್ತು.
ನಕ್ಸಲ್ ನಿಗ್ರಹ ಪಡೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ವಿಠಲ್ 6 ನೇ ಆರೋಪಿಯಾಗಿದ್ದು, ತಂದೆ 7 ನೇ ಆರೋಪಿಯಾಗಿದ್ದರು.
ಬಂಧನಕ್ಕೊಳಗಾದ ಬಳಿಕ ಕೈಕೊಳ ತೊಟ್ಟುಕೊಂಡೇ ಪರೀಕ್ಷೆ ಬರೆದದ್ದು ಭಾರಿ ಸುದ್ದಿಯಾಗಿತ್ತು.ವಿಠಲ ಮಲೆಕುಡಿಯ ರಕ್ಷಣೆಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಾಟ್ ಬೆಂಬಲ ಸೂಚಿಸಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…