ಮಂಗಳೂರು : ಮಂಗಳೂರು ನಗರದಲ್ಲಿ ಖೋಟಾ ನೋಟು ಜಾಲ ಸಕ್ರೀಯವಾಗಿದ್ದು ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ತನಿಖೆ ತೀವ್ರಗೊಂಡಿದೆ.
ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮಂಜೇಶ್ವರ ಮೂಲದ ಪ್ರಶ್ವಿತ್(25) ಬಂಧಿತ ಆರೋಪಿಯಾಗಿದ್ದಾನೆ. ಭಾನುವಾರ ನಗರದ ಕಂಕನಾಡಿ ಬಳಿಯಲ್ಲಿ ಒಬ್ಬನು ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಆರೋಪಿ ಪ್ರಶ್ವಿತ್ ನನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿ 500 ರೂಪಾಯಿ ಮುಖಬೆಲೆಯ, 200 ರೂಪಾಯಿ ಮುಖಬೆಲೆಯ ಮತ್ತು 100 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು 500 ರೂ ಮುಖಬೆಲೆಯ 3 ನೋಟುಗಳು, 200 ರೂ ಮುಖಬೆಲೆಯ 2 ನೋಟುಗಳು ಹಾಗೂ 100 ರೂ ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿರುತ್ತಾರೆ. , ಈವರೆಗೆ ಸುಮಾರು 8 ರಿಂದ 9 ಸಾವಿರ ರೂಗಳ ಖೋಟಾ ನೋಟುಗಳನ್ನು ಆರೋಪಿ ಚಲಾವಣೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…