ಮಂಗಳೂರು: ‘ನಗರದ ಅತ್ಯಂತ ಪುರಾತನ ದೇವಸ್ಥಾನವಾದ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ’ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ.
ಈ ಕುರಿತು ಮಾತಾನಾಡಿದ ಅವರು, ‘2019-20 ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸಿ ಸ್ಥಳಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ 50 ಲಕ್ಷ ಮಂಜೂರಾಗಿದ್ದು ಅದರಲ್ಲಿ ಪ್ರಸ್ತುತ ಸಾಲಿನಲ್ಲಿ 25 ಲಕ್ಷ ರೂಪಾಯಿಗಳು ಮೊದಲ ಹಂತದಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ’ ಎಂದು ಹೇಳಿದರು.
‘ಮಂಗಳೂರನ್ನು ಪ್ರವಾಸಿ ತಾಣವಾಗಿಸಲು ಬೇಕಾಗಿರುವ ಅನುದಾನವನ್ನು ನೀಡುವಲ್ಲಿ ನಮ್ಮ ಪ್ರಯತ್ನಗಳು ನಿರಂತರವಾಗಿ ನಡೆಯಲಿದೆ. ಈಗಾಗಲೇ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ 6 ಕುದ್ರುಗಳು, ಸುಲ್ತಾನ್ ಬತ್ತೇರಿ, ಬೆಂಗರೆ ಪ್ರದೇಶಗಳ ಅಭಿವೃದ್ಧಿಯ ಕುರಿತು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸರಕಾರದೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು’ ಎಂದು ಶಾಸಕರು ತಿಳಿಸಿದ್ದಾರೆ.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಸಾಕಷ್ಟು ಇದೆ. ಮಾರಿಗುಡಿ ದೇವಸ್ಥಾನದಂತೆ ಅತೀ ಪುರಾತನ ದೇವಾಲಯಗಳೂ ಕೂಡ ಸಾಕಷ್ಟು ಸಂಖ್ಯೆಯಲ್ಲಿದೆ. ಅವೆಲ್ಲವನ್ನೂ ಕೂಡ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಅಭಿವೃದ್ಧಿಪಡಿಸಲು ಶ್ರಮಿಸುತ್ತೇವೆ’ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…