Featured

ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್ – vishwanews24

ಮಂಗಳೂರು: ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ: ನೂತನ ಮೇಯರ್ ಮನೋಜ್ ಕೋಡಿಕಲ್

ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಉಪಮೇಯರ್ ಭಾನುಮತಿ ಪಿ.ಎಸ್

ಮಂಗಳೂರು: ರಾಜ್ಯದಲ್ಲಿ ಬೆಂಗಳೂರು ಬಳಿಕ ಅತೀ ದೊಡ್ಡ ಹಾಗೂ ಶೀಘ್ರ ಗತಿಯಲ್ಲಿ ಬೆಳೆವಣಿಗೆ ಕಾಣುತ್ತಿರುವ ಮಂಗಳೂರು ನಗರದ ಅಭಿವೃದ್ಧಿಗೆ ನಾನು ಮೊದಲ ಆದ್ಯತೆ ನೀಡುತ್ತೇನೆ ಎಂದು ನೂತನ ಮೇಯರ್ ಆಗಿ ಆಯ್ಕೆಯಾದ ಮನೋಜ್ ಕುಮಾರ್ ಕೋಡಿಕಲ್ ಹೇಳಿದರು.

ಮೇಯರ್ ಆಗಿ ಆಯ್ಕೆಯಾದ ಬಳಿಕ ಮಾಧ್ಯಮದ ಜತೆ ಮಾತನಾಡಿದ ಅವರು, ಮೊದಲ ಬಾರಿ ಮನಪಾ ಸದಸ್ಯನಾ ಗಿರುವ ನನಗೆ ಮೇಯರ್ ಅವಕಾಶ ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷಕ್ಕೆ, ನಾಯಕರಿಗೆ ನಾನು ಅಭಾರಿಯಾಗಿ ದ್ದೇನೆ. ಈ ಹಿಂದಿನ ನಾಲ್ಕು ಮೇಯರ್‌ಗಳು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಅವರನ್ನು ಮಾದರಿಯಾಗಿಟ್ಟು ಆ ಯೋಜನೆಗಳ ಜತೆ ಮತ್ತಷ್ಟು ರೂಪುರೇಷೆಗಳನ್ನು ರಚಿಸಿ ಮುಂದುವರಿಯುತ್ತೇನೆ. ನಗರದ ರಸ್ತೆ, ನೀರು ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುತ್ತೇನೆ. ಭೌಗೋಳಿಕತೆ, ಪ್ರಾಕೃತಿಕವಾಗಿ ಮಂಗಳೂರು ನಗರದ ಅಭಿವೃದ್ಧಿಗೆ ವಿಫುಲ ಅವಕಾಶವಿದ್ದು, ನನ್ನ ಆಡಳಿತ ಅವಧಿಯಲ್ಲಿ ಪ್ರತಿಪಕ್ಷ ನಾಯಕರು, ಎಲ್ಲ ಸದಸ್ಯರು, ಅಧಿಕಾರಿ ವರ್ಗವನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುತ್ತೇನೆ ಎಂದರು.

ಭಾರತೀಯ ಜನತಾ ಪಕ್ಷ ನನಗೆ ಉಪಮೇಯರ್ ಸ್ಥಾನ ನೀಡಿ ದೊಡ್ಡ ಜವಾಬ್ದಾರಿ ನೀಡಿದ್ದು, ತುಂಬಾ ಖುಷಿಯಾಗಿದೆ. ಇದಕ್ಕೆ ಪಕ್ಷದ ಎಲ್ಲಾ ನಾಯಕರಿಗೆ ಅಭಾರಿಯಾಗಿದ್ದೇನೆ. ಆಡಳಿತಾವಧಿಯಲ್ಲಿ ಜನರ ನಿರೀಕ್ಷೆಗೆ ಕಿಂಚಿತ್ತೂ ನಿರಾಶೆ ಯಾಗದಂತೆ ಕರ್ತವ್ಯ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಪಮೇಯರ್ ಭಾನುಮತಿ ಪಿ.ಎಸ್. ಹೇಳಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

21 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago