Featured

ಮಂಗಳೂರು: ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣ : ಮೂವರ ಬಂಧನ -Vishwanews24

ಮಂಗಳೂರು: ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣ : ಮೂವರ ಬಂಧನ -Vishwanews24

ಮಂಗಳೂರು: ಮೂರು ದಿನಗಳ ಹಿಂದೆ ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾವೂರಿನ ರಕ್ಷಕ್ ಶೆಟ್ಟಿ (22), ಬೊಂದೆಲ್‌ನ ಅಲಿಸ್ಟರ್ ತಾವ್ರೋ (21), ಕಾವೂರು ಕೈಒಸಿಎಲ್ ಕ್ವಾರ್ಟರ್ಸ್‌ನ ರಾಹುಲ್ ಸಿನ್ಹಾ (21) ಬಂಧಿತ ಆರೋಪಿಗಳು.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜ.13ರಂದು ಸಂಜೆ 7 ಗಂಟೆ ಸುಮಾರಿಗೆ ನಾಲ್ವರು ಬಾಲಕರು ಕೊಂಚಾಡಿ ದೇವಸ್ಥಾನಕ್ಕೆ ಹೋಗಿ ಮರಳಿ ಮನೆಯತ್ತ ತೆರಳುತ್ತಿದ್ದರು. ಮೂವರು ಬಾಲಕರು ದೇವಳ ಪ್ರಾಂಗಣ ದಾಟಿ ಎದುರು ರಸ್ತೆಯಲ್ಲಿ ತೆರಳುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ರಸ್ತೆ ಬದಿ ನಿಂತಿದ್ದರು. ಆ ಪೈಕಿ ಓರ್ವ ಎದುರಿನಲ್ಲಿ ಹೋಗುತ್ತಿದ್ದ ಬಾಲಕನಿಗೆ ಗೋಣಿ ಚೀಲ ಮುಸುಕು ಹಾಕಲು ಯತ್ನಿಸಿದ್ದಾನೆ. ಬಾಲಕ ಆತನಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದನು. ಬಳಿಕ ದುಷ್ಕರ್ಮಿಯು ಕೂಡಲೇ ಇನ್ನೊಬ್ಬ ಬಾಲಕನಿಗೆ ಮುಸುಕು ಹಾಕಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಹಿಂದಿನಿಂದ ಬರುತ್ತಿದ್ದ ಮತ್ತೋರ್ವ ಬಾಲಕ ಅಪಹರಣಕಾರರತ್ತ ಕಲ್ಲು ಹೆಕ್ಕಿ ಎಸೆದ್ದಾನೆ. ಅಷ್ಟರಲ್ಲಿ ಅಪಾಯ ಅರಿತ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು ಎಂದರು.

ಆರೋಪಿಗಳು ಯೂಟ್ಯೂಬರ್ಸ್ ಎಂದು ಹೇಳಿಕೊಂಡಿದ್ದಾರೆ. ‘ಪ್ರಾಂಕ್’ ಮಾಡಲು ಬಾಲಕರ ಅಪಹರಣ ಯತ್ನ ನಡೆಸಿದೆವು ಎಂದು ಹೇಳಿಕೊಂಡಿದ್ದಾರೆ. ಆದರೆ ಪೊಲೀಸರ ಹಲವು ಪ್ರಶ್ನೆಗಳಿಗೆ ಅವರು ಇಲ್ಲಿಯವರೆಗೂ ಸಮರ್ಪಕ ಉತ್ತರ ನೀಡಿಲ್ಲ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ ಎಂದರು.

http://ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ : ಸಿದ್ದರಾಮಯ್ಯ ಶುಭ ಹಾರೈಕೆ -Vishwanews24

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago