Featured

ಮಂಗಳೂರು: ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣ : ಮೂವರ ಬಂಧನ -Vishwanews24

ಮಂಗಳೂರು: ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣ : ಮೂವರ ಬಂಧನ -Vishwanews24

ಮಂಗಳೂರು: ಮೂರು ದಿನಗಳ ಹಿಂದೆ ನಗರದ ಕೊಂಚಾಡಿ ದೇವಸ್ಥಾನ ಸಮೀಪ ಬಾಲಕರನ್ನು ಅಪಹರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾವೂರಿನ ರಕ್ಷಕ್ ಶೆಟ್ಟಿ (22), ಬೊಂದೆಲ್‌ನ ಅಲಿಸ್ಟರ್ ತಾವ್ರೋ (21), ಕಾವೂರು ಕೈಒಸಿಎಲ್ ಕ್ವಾರ್ಟರ್ಸ್‌ನ ರಾಹುಲ್ ಸಿನ್ಹಾ (21) ಬಂಧಿತ ಆರೋಪಿಗಳು.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜ.13ರಂದು ಸಂಜೆ 7 ಗಂಟೆ ಸುಮಾರಿಗೆ ನಾಲ್ವರು ಬಾಲಕರು ಕೊಂಚಾಡಿ ದೇವಸ್ಥಾನಕ್ಕೆ ಹೋಗಿ ಮರಳಿ ಮನೆಯತ್ತ ತೆರಳುತ್ತಿದ್ದರು. ಮೂವರು ಬಾಲಕರು ದೇವಳ ಪ್ರಾಂಗಣ ದಾಟಿ ಎದುರು ರಸ್ತೆಯಲ್ಲಿ ತೆರಳುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ರಸ್ತೆ ಬದಿ ನಿಂತಿದ್ದರು. ಆ ಪೈಕಿ ಓರ್ವ ಎದುರಿನಲ್ಲಿ ಹೋಗುತ್ತಿದ್ದ ಬಾಲಕನಿಗೆ ಗೋಣಿ ಚೀಲ ಮುಸುಕು ಹಾಕಲು ಯತ್ನಿಸಿದ್ದಾನೆ. ಬಾಲಕ ಆತನಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದನು. ಬಳಿಕ ದುಷ್ಕರ್ಮಿಯು ಕೂಡಲೇ ಇನ್ನೊಬ್ಬ ಬಾಲಕನಿಗೆ ಮುಸುಕು ಹಾಕಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಹಿಂದಿನಿಂದ ಬರುತ್ತಿದ್ದ ಮತ್ತೋರ್ವ ಬಾಲಕ ಅಪಹರಣಕಾರರತ್ತ ಕಲ್ಲು ಹೆಕ್ಕಿ ಎಸೆದ್ದಾನೆ. ಅಷ್ಟರಲ್ಲಿ ಅಪಾಯ ಅರಿತ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು ಎಂದರು.

ಆರೋಪಿಗಳು ಯೂಟ್ಯೂಬರ್ಸ್ ಎಂದು ಹೇಳಿಕೊಂಡಿದ್ದಾರೆ. ‘ಪ್ರಾಂಕ್’ ಮಾಡಲು ಬಾಲಕರ ಅಪಹರಣ ಯತ್ನ ನಡೆಸಿದೆವು ಎಂದು ಹೇಳಿಕೊಂಡಿದ್ದಾರೆ. ಆದರೆ ಪೊಲೀಸರ ಹಲವು ಪ್ರಶ್ನೆಗಳಿಗೆ ಅವರು ಇಲ್ಲಿಯವರೆಗೂ ಸಮರ್ಪಕ ಉತ್ತರ ನೀಡಿಲ್ಲ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ತನಿಖೆ ಮುಂದುವರಿದಿದೆ ಎಂದರು.

http://ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ : ಸಿದ್ದರಾಮಯ್ಯ ಶುಭ ಹಾರೈಕೆ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago