ಮಂಗಳೂರು : ನಗರದ 15 ಜಂಕ್ಷನ್‌ಗಳಲ್ಲಿ 75 ಸಿಸಿ ಕ್ಯಾಮೆರಾ ಅಳವಡಿಕೆ -Vishwanews24

ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಸ್ಮಾರ್ಟ್‌ ಆಗಿ ಬೆಳೆಯುತ್ತಿರುವ ಮಂಗಳೂರು, ನಗರದಲ್ಲಿ ನಡೆಯುವ ಕೊಲೆ, ಸುಳಿಗೆ ಮೊದಲಾದ ಅಪರಾಧಗಳನ್ನು ಪತ್ತೆ ಹಚ್ಚುವಲ್ಲೂ ಸ್ಮಾರ್ಟ್ ಹಾದಿಯತ್ತ ಹೆಜ್ಜೆ ಇಟ್ಟಿದೆ. ನಗರದ 15 ಜಂಕ್ಷನ್‌ಗಳಲ್ಲಿ 75 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು ಕ್ಯಾಮೆರಾಗಳ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ.

ಪೊಲೀಸರಿಗೆ ಕೊಲೆ, ಸುಳಿಗೆ ಮೊದಲಾದ ಅಪರಾಧಗಳನ್ನು ಪತ್ತೆ ಹಚ್ಚಲು ಅನುಕೂಲವಾಗುವಂತೆ ಸ್ಮಾರ್ಟ್ ಸಿಟಿ ಯೋಜನೆಯ ಮೊದಲ ಹಂತದಲ್ಲಿ ನಗರದ 15 ಜಂಕ್ಷನ್‌ಗಳಲ್ಲಿರುವ ಸ್ಮಾರ್ಟ್ ಫೋಲ್‌ಗಳಲ್ಲಿ ಒಟ್ಟು 75 ಕ್ಯಾಮೆರಗಳನ್ನು ಅಳವಡಿಸಲಾಗುತ್ತದೆ. ಪ್ರತಿ ಜಂಕ್ಷನ್‌ನಲ್ಲಿಯೂ 360 ಡಿಗ್ರಿ ಸುತ್ತ ಸುತ್ತುವ ಕ್ಯಾಮೆರಗಳ ಸಹಿತ ಪತ್ರಿ ಜಂಕ್ಷನ್‌ನ ಒಂದು ಸ್ಮಾರ್ಟ್ ಫೋಲ್‌ನಲ್ಲಿ ಒಟ್ಟು 4 ಕ್ಯಾಮೆರಾಗಳು ಇರಲಿವೆ ಎಂದು ಸ್ಮಾರ್ಟ್ ಸಿಟಿ ಆಯುಕ್ತರಾದ ಮೊಹಮ್ಮದ್‌ ನಝೀರ್‌ ತಿಳಿಸಿದ್ದಾರೆ.

ನಮ್ಮ ನಗರಕ್ಕೆ ಸಂಬಂಧಿಸಿದಂತೆ ಟ್ರಾಫಿಕ್‌, ಮಹಾನಗರ ಪಾಲೆಕೆಯ ವತಿಯಿಂದ ನೀಡುವ ಸೌಲಭ್ಯಗಳನ್ನು ಉಸ್ತುವಾರಿ ನೋಡಿಕೊಳ್ಳಲು ಇದು ಸಹಾಯಕವಾಗಲಿದೆ. ಸಿಸಿ ಟಿವಿ ನಿರ್ವಹಣೆ ಮಾಡಲು ಮಹಾನಗರ ಪಾಲಿಕೆಯ ಮೊದಲ ಮಹಡಿಯಲ್ಲಿ ಕಂಟ್ರೋಲ್‌ ರೂಂ ಕೂಡಾ ಸಿದ್ಧ ಮಾಡಲಾಗಿದೆ. ಇನ್ನು ಜಂಕ್ಷನ್‌ಗಳಲ್ಲಿ ಸ್ಮಾರ್ಟ್ ಪೋಲ್‌ಗಳನ್ನು ಅವಲಡಿಸುವ ಕಾರ್ಯ ನಡೆಯುತ್ತಿದ್ದು ಕೆಲವು ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ನಗರದಲ್ಲಿ ಒಟ್ಟು 2000 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳು ಇವೆ. ಇತ್ತೀಚೆಗೆ ಸಾರ್ವಜನಿಕ ವಲಯಗಳಲ್ಲಿ ಒಟ್ಟು 210 ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇನ್ನು ಸಿಸಿ ಟಿವಿ ಕ್ಯಾಮೆರಾಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.

ಎರಡನೇ ಹಂತದಲ್ಲಿ ಇದೇ ರೀತಿಯಾಗಿ ಇನ್ನೂ 25 ಜಂಕ್ಷನ್‌ಗಳಲ್ಲಿ ಸುಮಾರು 125 ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ನಗರದಲ್ಲಿ ಬಿಜೈ, ಕೆಎಸ್‌ಆರ್‌ಟಿಸಿ, ಪದವಿನಂಗಡಿ, ಪಂಪ್‌ವೆಲ್‌, ವಾಮಂಜೂರು, ಮಲ್ಲಿಕಟ್ಟೆ, ಪಡೀಲ್‌, ಮಾರ್ಗನ್ಸ್‌ಗೇಟ್‌, ಕುಲಶೇಖರ, ಬೆಂದೂರ್‌, ಕೊಟ್ಟಾರ ಚೌಕಿ, ಫಳ್ನೀರ್‌, ಶಕ್ತಿನಗರ ಕ್ರಾಸ್‌, ಕುಂಟಿಕಾನ,ರಾವ್‌ ಆಂಡ್‌ ರಾವ್‌ ವೃತ್ತ, ಕಾವೂರು ಜಂಕ್ಷನ್‌ನಲ್ಲಿ ಸಿಸಿಟಿವಿ ಅಳವಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago