Featured

ಮಂಗಳೂರು ನಗರ ದಕ್ಷಿಣ: ಮೂರನೇ ಬಾರಿಗೆ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾದ ಜೆ.ಆರ್.ಲೋಬೊ – Vishwanews24

ಮಂಗಳೂರು ನಗರ ದಕ್ಷಿಣ: ಮೂರನೇ ಬಾರಿಗೆ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾದ ಜೆ.ಆರ್.ಲೋಬೊ

ಮಂಗಳೂರು, : ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಇಂದು ಪಕ್ಷವು ಪ್ರಕಟಿಸಿದ್ದು, ಮಾಜಿ ಶಾಸಕ ಜೆ.ಆರ್.ಲೋಬೊ ಮೂರನೇ ಬಾರಿಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸತತ ನಾಲ್ಕು ಬಾರಿ ಶಾಸಕರಾಗಿದ್ದ ಎನ್.ಯೋಗೀಶ್ ಭಟ್‌ರನ್ನು 2013ರ ಚುನಾವಣೆಯಲ್ಲಿ 12,275 ಮತಗಳ ಅಂತರದಿಂದ ಮಣಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿದ್ದ ಜೆ.ಆರ್.ಲೋಬೊ, 2018ರ ಚುನಾವಣೆಯಲ್ಲಿ ಬಿಜೆಪಿಯ ಡಿ.ವೇದವ್ಯಾಸ ಕಾಮತ್ ವಿರುದ್ಧ 16,075 ಮತಗಳ ಅಂತರದಿಂದ ಸೋಲುಂಡಿದ್ದರು.

70ರ ಹರೆಯದ ಲೋಬೊ ಶಾಸಕರಾಗಿದ್ದಾಗ ಮಂಗಳೂರು ನಗರಕ್ಕೆ 750 ಕೋ.ರೂ. ಮೊತ್ತದ ‘ಜಲಸಿರಿ’ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ ಸಹಿತ ಅನೇಕ ಯೋಜನೆಗಳ ಕಾಮಗಾರಿಯನ್ನು ಅನುಷ್ಠಾನಗೊಳಿಸಿದ್ದರು.

ಜಾನ್ ರಿಚರ್ಡ್ ಲೋಬೊ ತನ್ನ 23ರ ಹರೆಯದಲ್ಲೇ ಕೆಎಎಸ್ ತೇರ್ಗಡೆಯಾಗಿ ತಹಶೀಲ್ದಾರ್, ಸಹಾಯಕ ಆಯುಕ್ತ, ಮಹಾನಗರ ಪಾಲಿಕೆ ಆಯುಕ್ತ, ಕರ್ನಾಟಕ ನಗರಾಭಿವೃದ್ಧಿ ಮತ್ತು ಕರಾವಳಿ ಪರಿಸರ ನಿರ್ವಹಣೆ ಯೋಜನೆಯ ಜಂಟಿ ಯೋಜನಾ ನಿರ್ದೇಶಕರಾಗಿ, ಜಿಲ್ಲಾಧಿಕಾರಿಯ ಸ್ಥಾನೀಯ ಸಹಾಯಕ ಹೀಗೆ ಹಲವು ಹುದ್ದೆಗಳಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ರಾಜಕೀಯ ರಂಗ ಪ್ರವೇಶಿಸಿದ್ದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago