ಮಂಗಳೂರು : ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮಂಗಳೂರು ನಗರದ ಕೋಡಿಕಲ್ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ನಾಲ್ವರ ಪೈಕಿ ಸುಮಿತ್ ಹಾಗೂ ಅನಿಶ್ ನದಿ ನೀರಿನ ಸುಳಿಗೆ ಸಿಲುಕಿ ನೀರುಪಾಲಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಬಜಪೆ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದರು. ಅಗ್ನಿಶಾಮಕ ದಳದವರು ಬೆಳಕಿನ ವ್ಯವಸ್ಥೆಯೊಂದಿಗೆ ತಡರಾತ್ರಿಯವರೆಗೂ ಶೋಧ ಕಾರ್ಯ ನಡೆಸಿದ್ದು, ಸ್ಥಳಕ್ಕೆ ಮುಳುಗು ತಜ್ಞರು ಕೂಡ ಆಗಮಿಸಿದ್ದರು. ಜೊತೆಗೆ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ಜಿ.ಎಸ್. ಮತ್ತು ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು.
ಮೃತ ಸುಮಿತ್ ಕೊಟ್ಟಾರ ಚೌಕಿಯಲ್ಲಿನ ಗ್ಯಾರೇಜ್ ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಅನಿಶ್ ಸೋಡಾ ಫಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…