ಮಂಗಳೂರು: ಬಿಜೆಪಿ ಟಿಕೆಟ್ಗಾಗಿ ಡೀಲ್ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ಹೆಸರು ಕೇಳಿಬಂದಿದೆ. ಚೈತ್ರಾ ಕುಂದಾಪುರ ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ವಿಶ್ವ ಹಿಂದು ಪರಿಷತ್ ಸಂಘಟನೆಯಲ್ಲಿ ಗುರುತಿಸಿರುವ ಮಂಗಳೂರಿನ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೆಸರು ಕೇಳಿಬಂದಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಸ್ವಾಮೀಜಿ, ನನಗೂ ಆಕೆಯ ಪ್ರಕರಣಕ್ಕೂ ಸಂಬಂಧ ಇಲ್ಲ. ಜುಲೈ ತಿಂಗಳಲ್ಲಿ ಹಿಂದೂ ಸಂಘಟನೆಯ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿದ್ದರು. ಗೋವಿಂದ ಪೂಜಾರಿ ಟಿಕೆಟ್ ವಿಚಾರದಲ್ಲಿ ನನಗೆ ಪ್ರಶ್ನೆ ಮಾಡಿದ್ದರು. ಆದರೆ ನನಗೇನೂ ತಿಳಿದಿರಲಿಲ್ಲ, ನನ್ನಲ್ಲಿ ಯಾಕೆ ಪ್ರಶ್ನೆ ಮಾಡುವುದೆಂದು ಕೇಳಿದ್ದೆ. ಬಳಿಕ ಅವರೇ ಫೋನ್ ಮಾಡಿ, ಚೈತ್ರಾ ಮತ್ತು ಅಭಿನವ ಹಾಲಶ್ರೀ ಹೆಸರಿದೆ ಎಂದು ಹೇಳಿದ್ದರು ಎಂದರು.
ಚೈತ್ರಾ ಜೊತೆ ಸಂಪರ್ಕ ಇದ್ದುದರಿಂದ ಆಕೆಗೆ ಫೋನ್ ಮಾಡಿ ಸ್ಪಷ್ಟನೆ ಕೇಳಿದ್ದೆ. ಮೂರು ಕೋಟಿ ದುಡ್ಡಿನ ಬಗ್ಗೆ ಕೇಳಿದಾಗ, ಒಂದೂವರೆ ಇದ್ದಿದ್ದು ಮೂರು ಕೋಟಿ ಆಯ್ತಾ? ಇನ್ನು ಅದು 4-5 ಕೋಟಿ ಆಗಬಹುದು ಎಂದು ಆಕೆ ಹೇಳಿದ್ದಳು, ಸತ್ಯ ಹೇಳು ಎಂದಿದ್ದೆ. ಆಕೆ ತನಗೇನೂ ಗೊತ್ತಿಲ್ಲ ಎಂದಿದ್ದರು, ಚಕ್ರವರ್ತಿ ಸೂಲಿಬೆಲೆ ಅವರಿಗೂ ಫೋನ್ ಮಾಡಿದ್ದೆ. ಅಭಿನವ ಹಾಲಶ್ರೀ ಸ್ವಾಮೀಜಿ, ಸೂಲಿಬೆಲೆ ಜೊತೆಗೆ ಗುರುತಿಸಿದ್ದರಿಂದ ಅವರಿಗೂ ವಿಷಯ ತಿಳಿಸಿದ್ದೆ ಎಂದು ಹೇಳಿದರು.
ನಾವು ವಿಶ್ವ ಹಿಂದೂ ಪರಿಷತ್ತಿನಲ್ಲಿ ಗುರುತಿಸಿದ್ದರಿಂದ ಶರಣ್ ಪಂಪ್ ವೆಲ್ ಅವರಿಗೂ ವಿಷಯ ತಿಳಿಸಿದ್ದೇವೆ. ನಿಮಗೇನೂ ಸಂಪರ್ಕ ಇಲ್ಲಾಂದ್ರೆ ನೀವ್ಯಾಕೆ ತಲೆ ಬಿಸಿ ಮಾಡ್ತೀರಿ ಎಂದು ಶರಣ್ ಹೇಳಿದ್ದರು. ಈಗ ನನ್ನ ಹೆಸರನ್ನು ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ವಿಷಯ ಇಷ್ಟೇ ಆಗಿದ್ದರೂ, ನನ್ನ ಹೆಸರು ಬಂದಿರುವುದು ಬೇಸರವಾಗಿದೆ. ಹಣದ ವಿಚಾರದಲ್ಲಿ ತನಗೇನೂ ಗೊತ್ತಿಲ್ಲ, ಚೈತ್ರಾಳ ಪರಿಚಯ ಇದ್ದುದು ಹೌದು. ಹಾಗಂತ, ಆಕೆಯ ಜೊತೆಗೆ ಬೇರೇನೂ ಸಂಪರ್ಕ, ಮಾತುಕತೆ, ವಹಿವಾಟು ಇಲ್ಲ ಎಂದು ಅವರು ತಿಳಿಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…